ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಸುಳ್ಯ ಘಟಸಮಿತಿ ಹಾಗೂ ಆದಿ ದ್ರಾವಿಡ ಯುವ ವೇದಿಕೆ ಹಾಗೂ ಮಹಿಳಾ ಸಮಿತಿ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಪೂಜ್ಯ ಶ್ರೀಗಳ ಜನ್ಮದಿನೋತ್ಸವ ಗ್ರಾಮೋತ್ಸವ ಅಂಗವಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ಘಟಸಮಿತಿ ಅಧ್ಯಕ್ಷರಾದ ಸಂದೀಪ್, ನಿಕಟಪೂರ್ವ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಪದ್ಮನಾಭ,ವಲಯ ಸಂಯೋಜಕಿ ರೇವತಿ ಸೇವಾಧೀಕ್ಷಿತೆ ಪವಿತ್ರ. ಸುಳ್ಯ ಘಟಸಮಿತಿ ಪದಾಧಿಕಾರಿಗಳು, ಆದಿ ದ್ರಾವಿಡ ಯುವ ವೇದಿಕೆ ಮತ್ತು ಮಹಿಳಾ ಸಮಿತಿಯ ಪದಾಧಿಕಾರಿಗಳು ಸಮಿತಿ ಯ‌ ಸದಸ್ಯರು ಹಾಗೂ ಗ್ರಾಮ ವಿಕಾಸ ಯೋಜನೆ ಸದಸ್ಯರು ಉಪಸ್ಥಿತರಿದ್ದರು.