ಪಂಜದಲ್ಲಿ ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಜನಸಂಪರ್ಕ ಅಭಿಯಾನ-ಉದ್ಘಾಟನೆ

0

ಲಯನ್ಸ್ ಕ್ಲಬ್ ಪಂಜ, ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದೊಂದಿಗೆ ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ ಹಾಗೂ ಅಂಚೆ ಜನಸಂಪರ್ಕ ಅಭಿಯಾನ ಜು.18 ರಂದು ಪಂಜ ಲಯನ್ಸ್ ಕ್ಲಬ್ ಸಭಾಭವನದಲ್ಲಿ ಜರುಗಿತು.

ಪಂಜ ನಾಡ ಕಚೇರಿ, ಕಂದಾಯ ನಿರೀಕ್ಷಕ ರಂಜನ್ ಕಲ್ಕುದಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ್ ಪಳಂಗಾಯ ಸಭಾಧ್ಯಕ್ಷತೆ ವಹಿಸಿದ್ದರು.

ಅತಿಥಿಗಳಾದ ಪುತ್ತೂರು ವಿಭಾಗದ ಅಂಚೆ ಹಿರಿಯ ಅಧೀಕ್ಷಕ ಹರೀಶ್, ಪುತ್ತೂರು ವಿಭಾಗದ ಸಹಾಯಕ ಅಂಚೆ ಅಧೀಕ್ಷಕ ಚಂದ್ರ ನಾಯ್ಕ್ , ಸುಳ್ಯ ಉಪ ವಿಭಾಗದ ಅಂಚೆ ನಿರೀಕ್ಷಕ ವಿನೋದ್ ಕುಮಾರ್ ರವರು ಇಲಾಖೆಯ ಮಾಹಿತಿ ನೀಡಿದರು. ಪಂಜ ಲಯನ್ಸ್ ಕ್ಲಬ್ ನಿಕಟಪೂರ್ವಾಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು,ಕಾರ್ಯದರ್ಶಿ ಮೋಹನ್ ದಾಸ್ ಕೂಟಾಜೆ, ಕೋಶಾಧಿಕಾರಿ ಸುರೇಶ್ ಕುಮಾರ್ ನಡ್ಕ,ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಾಸುದೇವ ಮೇಲ್ಪಾಡಿ ವೇದಿಕೆಗೆ ಆಹ್ವಾನಿಸಿದರು. ಕೇಶವ ಕುದ್ವ ಪ್ರಾರ್ಥಿಸಿದರು. ಶಶಿಧರ ಪಳಂಗಾಯ ಸ್ವಾಗತಿಸಿದರು. ಮೋಹನ್ ದಾಸ್ ಕೂಟಾಜೆ ವಂದಿಸಿದರು.