ಹಿಂದಿ ಚಲನಚಿತ್ರ ನಟಿ ಏಕ್ತಾ ಕಪೂರ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ

0

ಹಿಂದಿ ಚಲನಚಿತ್ರ ರಂಗದ ನಿರ್ದೇಶಕಿ ಹಾಗೂ ನಟಿ ಏಕ್ತಾ ಕಪೂರ್ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಆಗಮಿಸಿ ಆಶ್ಲೇಷ ಬಲಿ ,ನಾಗ ಪ್ರತಿಷ್ಠ ಪೂಜೆಗಳನ್ನು ನೆರವೇರಿಸಿರುವರು.

ಅವರೊಂದಿಗೆ ಮುಂಬೈ ರವಿ ಕೋಟಿಯನ್ ಜೊತೆಗಿದ್ದರು. ದೇವಳದಲ್ಲಿ ದೇವರ ದರ್ಶನ ಮಾಡಿದ ಬಳಿಕ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ವತಿಯಿಂದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ,ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್, ಹಾಗೂ ಕೃಷ್ಣಮೂರ್ತಿ ಭಟ್ ಬರಮಾಡಿಕೊಂಡರು.