ಜು.28: ಶ್ರೀ ಶಾರದಾಂಬ ಸಮೂಹ ಸಮಿತಿ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೆಸರುಗದ್ದೆ ದಸರಾ ಕ್ರೀಡೋತ್ಸವ -2024

0

ಸುಳ್ಯದ ಶ್ರೀ ಶಾರದಾಂಬ ಸಮೂಹ ಸಮಿತಿ, ಶ್ರೀ ಭಗವತಿ ಯುವಸೇವಾ ಸಂಘ ಸುಳ್ಯ, ಬಂಟರ ಯಾನೆ ನಾಡವರ ಸಂಘ ಸುಳ್ಯ , ಲಯನ್ಸ್ ಕ್ಲಬ್ ಸುಳ್ಯ, ರೋಟರಿ ಕ್ಲಬ್ ಸುಳ್ಯ, ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ಸಂಯುಕ್ತ ಆಶ್ರಯದಲ್ಲಿ ಕೆಸರುಗದ್ದೆ ದಸರಾ ಕ್ರೀಡೋತ್ಸವ – 2024 ಸುಳ್ಯದ ಪನ್ನೆಬೀಡು ಶ್ರೀ ಭಗವತಿ ಕ್ಷೇತ್ರದ ಮುಂಭಾಗದ ಗದ್ದೆಯಲ್ಲಿ ಜು.28ರಂದು ಜರುಗಲಿದೆ.

ಕಾರ್ಯಕ್ರಮವನ್ನು ಗದ್ದೆಯ ಮಾಲಕರಾದ ಕೃಪಾಶಂಕರ ತುದಿಯಡ್ಕ ಅವರು ಉದ್ಘಾಟಿಸಲಿದ್ದಾರೆ‌. ಗದ್ದೆಯ ಮಾಲಕರಾದ ಬೂಡು ರಾಧಾಕೃಷ್ಣ ರೈ ಅವರು ಕ್ರೀಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಶ್ರೀ ಶಾರದಾಂಬ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕಿ ಭಾಗೀರಥಿ ಮುರುಳ್ಯ, ಶ್ರೀ ಶಾರದಾಂಬ ಉತ್ಸವ ಸಮಿತಿ ಗೌರವಾಧ್ಯಕ್ಷ ಕೃಷ್ಣಕಾಮತ್ ಅರಂಬೂರು, ಶ್ರೀ ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷ ಡಾ. ಲೀಲಾಧರ್ ಡಿ.ವಿ., ಶ್ರೀ ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್., ಶ್ರೀ ಭಗವತಿ ಯುವ ಸೇವಾ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಕೇರ್ಪಳ, ಸುಳ್ಯದ ಲಯನ್ಸ್ ಕ್ಲಬ್ ಅಧ್ಯಕ್ಷ ಲ. ರಾಮಕೃಷ್ಣ ರೈ, ಸುಳ್ಯದ ರೋಟರಿ ಕ್ಲಬ್ ಅಧ್ಯಕ್ಷೆ ರೊ. ಶ್ರೀಮತಿ ಯೋಗಿತಾ ಗೋಪಿನಾಥ್, ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ರೊ. ಶಿವಪ್ರಸಾದ್ ಕೆ.ವಿ. ಉಪಸ್ಥಿತರಿರಲಿದ್ದಾರೆ.

ಕ್ರೀಡಾ ಸಂಚಾಲಕರಾಗಿರುವ ದೊಡ್ಡಣ್ಣ ಬರಮೇಲು ಅವರ ನೇತೃತ್ವದಲ್ಲಿ ಕೆಸರುಗದ್ದೆ ಕ್ರೀಡಾಕೂಟ ಜರುಗಲಿದ್ದು, ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ, ಪುರುಷರಿಗೆ ಮತ್ತು ಮಹಿಳೆಯರಿಗೆ 100 ಮೀಟರ್ ಓಟ, ಎತ್ತಿನ ಬಂಡಿ ಓಟ (ಮೂರು ಜನ), ರಿಲೆ ಓಟ (ನಾಲ್ಕು ಜನ), ಹಿಮ್ಮುಖ ಓಟ, ನಿಧಿ ಶೋಧನೆ, ಪ್ರೌಢಶಾಲಾ ಬಾಲಕ – ಬಾಲಕಿಯರಿಗೆ 100 ಮೀ. ಓಟ ಮತ್ತು ರಿಲೆ ಓಟ ನಡೆಯಲಿದ್ದು, ಎಲ್ಲಾ ಸ್ಪರ್ಧೆ ಸೇರಿದಂತೆ ವೈಯುಕ್ತಿಕ ಸ್ಪರ್ಧೆಗಳಿಗೂ ಬಹುಮಾನವಿರುವುದಾಗಿ ಸಂಘಟಕರು ತಿಳಿಸಿದ್ದಾರೆ.