ಐವರ್ನಾಡು – ದೇರಾಜೆ ರಸ್ತೆ ಅಭಿವೃದ್ಧಿಗೆ ಅನುದಾನಕ್ಕಾಗಿ ಶಾಸಕರಿಗೆ ಮನವಿ

0

ಐವರ್ನಾಡು – ದೇರಾಜೆ ರಸ್ತೆ ಅಭಿವೃದ್ಧಿಗಾಗಿ ಶಾಸಕಿ ಭಾಗೀರಥಿ ಮುರುಳ್ಯರವರಿಗೆ ಜು.20 ರಂದು ಮನವಿ ಸಲ್ಲಿಸಲಾಯಿತು.


ಮನವಿಯಲ್ಲಿ ಐವರ್ನಾಡು ದೇರಾಜೆ ರಸ್ತೆ ತೀವ್ರ ಹದಗೆಟ್ಟಿದ್ದು ರಸ್ತೆ ಕಾಂಕ್ರೀಟೀಕರಣಕ್ಕಾಗಿ ರೂ.25 ಲಕ್ಷ ಅನುದಾನ ನೀಡಬೇಕೆಂದು ಮನವಿ ನೀಡಲಾಯಿತು.


ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ವಿನಯ ಕೋಡ್ತೀಲು,ಗ್ರಾಮ ಪಂಚಾಯತ್ ಸದಸ್ಯ ಎಸ್.ಎನ್.ದೇವಿಪ್ರಸಾದ್ ,ಶೇಖರ ಮಡ್ತಿಲ,ಪ್ರವೀಣ ಎಣ್ಣೆಕಳ ಉಪಸ್ಥಿತರಿದ್ದರು.