ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ಸುಂದರರಿಗೆ ಕಾಯಕ ರತ್ನ ಪ್ರಶಸ್ತಿ

0

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ನೌಕರರಾದ ಸುಂದರ ಅವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಕಾಯಕರತ್ನ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ಅವರು ಜುಲೈ 13ರಂದು ಬೀದರ ಪೂಜ್ಯ ಡಾl ಚನ್ನಬಸವ ಪಟ್ಟ ಸಿದ್ದೇಶ್ವರ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸ್ವಾಮೀಜಿಯವರಿಂದ ಪ್ರಶಸ್ತಿಯನ್ನು ಸ್ವೀಕರಿಸಿರುವರು.

ಹಿಂದಿನ ವರ್ಷ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ ತ್ರಿಮೂರ್ತಿಯವರು ಕಾಯಕ ರತ್ನ ಪ್ರಶಸ್ತಿಯನ್ನು ಪಡೆದಿದ್ದರು. ಸುಂದರ ಅವರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಲವಾರು ವರ್ಷಗಳಿಂದ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿ ಎಲ್ಲಾ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿರುತ್ತಾರೆ