ಜಾಲ್ಸೂರು: ಕದಿಕಡ್ಕದಲ್ಲಿ ಟಯರ್ ಬ್ಲಾಸ್ಟ್ ಆಗಿ ತಡೆಬೇಲಿಗೆ ಕಾರು ಢಿಕ್ಕಿ : ಜಖಂ

0

ಟಯರ್ ಬ್ಲಾಸ್ಟ್ ಆಗಿ ಕಾರೊಂದು ರಸ್ತೆ ಬದಿಯ ತಡೆಬೇಲಿಗೆ ಢಿಕ್ಕಿ ಹೊಡೆದು ಚಾಲಕ ಪಾರಾದ ಘಟನೆ ಜಾಲ್ಸೂರು ಗ್ರಾಮದ ಕದಿಕಡ್ಕದಲ್ಲಿ ಜು.22ರಂದು ಸಂಜೆ ಸಂಭವಿಸಿದೆ.

ಮಂಗಳೂರಿನಿಂದ ಮಡಿಕೇರಿಯ ಕುಶಾಲನಗರಕ್ಕೆ ತೆರಳುತ್ತಿದ್ದ ಕುಶಾಲನಗರದ ಧನಂಜಯ ಎಂಬವರು ಚಲಾಯಿಸುತ್ತಿದ್ದ ಕಾರು ಕದಿಕಡ್ಕದ ತಲುಪುತ್ತಿದ್ದಂತೆ ಟಯರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಢಿಕ್ಕಿ ಹೊಡೆದಿದ್ದು, ಚಾಲಕ ಅಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.