ಸುಬ್ರಹ್ಮಣ್ಯದ ರಸ್ತೆ ಕಾಂಕ್ರೀಟೀಕರಣ ಕಳಪೆ, ಅವೈಜ್ಞಾನಿಕ ಚರಂಡಿ ಕಾಮಗಾರಿ

0

ಜನಸಂಪರ್ಕ ಸಭೆಯಲ್ಲಿ ಉಸ್ತುವಾರಿ ಸಚಿವರಿಗೆ ಹರೀಶ್ ಇಂಜಾಡಿ ದೂರು

ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಂದ ಪರಿಶೀಲನೆ

ಕುಕ್ಕೆ ಸುಬ್ರಹ್ಮಣ್ಯ ಮಾಸ್ಟರ್ ಪ್ಲಾನ್ ಕಳಪೆ ಗುಣಮಟ್ಟದ ಕಾಂಕ್ರೀಟೀಕರಣ ಕಾಮಗಾರಿ, ಅವೈಜ್ಞಾನಿಕ ಚರಂಡಿ ಕಾಮಗಾರಿಯಾಗಿದೆ ಎಂದು ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆಮಾಡಿದ ಘಟನೆ ಜು.23 ರಂದು ನಡೆದಿದೆ.

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಇಂಜಾಡಿ ಅವರು ಇತ್ತೀಚೆಗೆ ಕಡಬದಲ್ಲಿ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನಡೆಸಿದ ಜನಸಂಪರ್ಕ ಸಭೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು. ದೂರಿನಲ್ಲಿ
ರಸ್ತೆ ನಿರ್ಮಾಣಗೊಂಡು ಕೆಲವೇ ವರ್ಷಗಳಾಗುವಷ್ಟರಲ್ಲೇ ರಸ್ತೆ ಅಲ್ಲಲ್ಲಿ ಶಿಥಿಲಗೊಂಡಿದೆ, ಕಳಪೆ ಗುಣಮಟ್ಟದ ಕಾಂಕ್ರೀಟೀಕರಣ ಕಾಮಗಾರಿ ಹಾಗೂ ಅವೈಜ್ಞಾನಿಕ ಚರಂಡಿ ಕಾಮಗಾರಿ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಅದರಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದಿಂದ ಕುಮಾರಧಾರ ವರೆಗೆ ಪರಿಶೀಲನೆಗೆ ತೆರಳಿದ ಅಧಿಕಾರಿಗಳು ಎಲ್ಲೆಲ್ಲಿ ಕಳಪೆ ಯಾಗಿದೆ, ಶಿಥಿಲಗೊಂಡಿದೆ ಹಾಗೂ ರಸ್ತೆ ಸಮಸ್ಯೆ, ಚರಂಡಿ ಸಮಸ್ಯೆ ಗಳನ್ನು ಪರಿಶೀಲನೆ ನಡೆಸಿದರು .

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ  ಸಹಾಯಕ ಕಾರ್ಯಪಾಲಕ ಅಭಿಯಂತರರು ಸೋಮ. ಬಿ, ಸುಬ್ರಹ್ಮಣ್ಯ ಲೋಕೋಪಯೋಗಿ ಇಲಾಖೆ  ಸಹಾಯಕ  ಅಭಿಯಂತರರು ಪ್ರಮೋದ್ ಕೆ. ಕೆ,
ಗುತ್ತಿಗೆ ದಾರರಾದ ಜಗದೀಶ್ ಪೈ, ದೇವಸ್ಥಾನದ ಇಂಜಿನಿಯರ್ ಉದಯಕುಮಾರ್,
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಇಂಜಾಡಿ, ಮಾಸ್ಟರ್ ಪ್ಲಾನ್ ಸದಸ್ಯರುಗಳಾದ ಪವನ್ ಎಂ.ಡಿ, ಸತೀಶ್ ಕುಜುಗೋಡು, ಲೋಲಾಕ್ಷ ಕೈಕಂಬ,
ಮಾಜಿ ಮಾಸ್ಟರ್ ಪ್ಲಾನ್ ಸದಸ್ಯ ಶಿವರಾಮ್ ರೈ ಮತ್ತಿತರರು ಉಪಸ್ಥಿತರಿದ್ದರು.