ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

0

ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಬಿಸಿ ಟ್ರಸ್ಟ್ (ರಿ) ಸುಳ್ಯ ತಾಲೋಕು ಇದರ ಅಜ್ಜಾವರ ವಲಯದ ಪೆರಾಲು ಕಾರ್ಯಕ್ಷೇತ್ರದ ಪೆರಾಲು ಎ ಒಕ್ಕೂಟದ ರಂಗೋಲಿ ಸಂಘದ ಸದಸ್ಯರಾದ ಲತಾಮಣಿಯರಿಗೆ ಅರೋಗ್ಯ ಸಮಸ್ಯೆ ಇದ್ದ ಕಾರಣ ಸಂಪೂರ್ಣ ಸುರಕ್ಷಾದಿಂದ ಮಂಜೂರಾದ 80ಸಾವಿರ ಮೊತ್ತದ ಚೆಕನ್ನು ಜು. 25 ರಂದು ವಿತರಿಸಲಾಯಿತು. ಸುಳ್ಯ ಯೋಜನಾ ಕಚೇರಿಯಲ್ಲಿ ಯೋಜನಾಧಿಕಾರಿ ಮಾಧವ ಗೌಡ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಾಲ್ಸೂರು ವಲಯದ ಮೇಲ್ವಿಚಾರಕರಾದ ತೀರ್ಥರಾಮ, ಪೇರಾಲು ಒಕ್ಕೂಟದ ಸೇವಾಪ್ರತಿನಿಧಿ ವಸಂತಿ ಮತ್ತು ಪೇರಾಲು ಒಕ್ಕೂಟದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಎಂ ಮತ್ತು ಫಲಾನುಭವಿ ಸದಸ್ಯರ ಮನೆಯವರು ಉಪಸ್ಥಿತರಿದ್ದರು.