ಸುಬ್ರಹ್ಮಣ್ಯ ರೋಟರಿ ವತಿಯಿಂದ ಬ್ಯಾಂಕ್ ವ್ಯವಹಾರದ ಬಗ್ಗೆ ಮಾಹಿತಿ

0

ರೋಟರಿ ಕ್ಲಬ್ ಸುಬ್ರಹ್ಮಣ್ಯ ವತಿಯಿಂದ ಗುರುವಾರ ಸಂಜೆ ವಾರದ ಸಪ್ತಾಹಿಕ ಸಭೆಯಲ್ಲಿ ಬ್ಯಾಂಕ್ ವ್ಯವಹಾರ ನಿರ್ವಹಣೆ ಬಗ್ಗೆ ಮಾಹಿತಿ ನೀಡಲಾಯಿತು.

ಸುಬ್ರಹ್ಮಣ್ಯ ಬ್ಯಾಂಕ್ ಆಫ್ ಬರೋಡ ಶಾಖೆಯ ಮ್ಯಾನೇಜರ್ ವಿಶ್ರುತ್ ಕುಮಾರ್ ಅವರು ಬ್ಯಾಂಕಿನ ವಿವಿಧ ಖಾತೆ ಗಳು ವಾಣಿಜ್ಯ ಕೃಷಿ ಸಾಲಗಳು ಶಿಕ್ಷಣ ಸಾಲಗಳು ಬ್ಯಾಂಕಿನಿಂದ ನೀಡುವ ಸೌಲಭ್ಯಗಳ ಬಗ್ಗೆ ನಿರ್ವಹಣೆ ಬಗ್ಗೆ ವ್ಯವಹಾರಗಳ ಬಗ್ಗೆ ವಿವರವಾಗಿ ತಿಳಿಸಿರುವರು ಸಭಾಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ನಾಯರ್ ವಹಿಸಿದ್ದರು. ವೇದಿಕೆಯಲ್ಲಿ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ಕಾರ್ಯದರ್ಶಿ ಚಿದಾನಂದ ಕುಳ, ಖಜಾಂಜಿ ಜಯಪ್ರಕಾಶ್ ಹಾಗೂ ಕ್ಲಬ್ಬಿನ ಪೂರ್ವ ಅಧ್ಯಕ್ಷರುಗಳು ಸದಸ್ಯರು ಹಾಜರಿದ್ದರು.