ಸಂಪಾಜೆ: ಕೈಪಡ್ಕದಲ್ಲಿ ಸ್ಕೂಟಿ ಸ್ಕಿಡ್ – ಗಂಭೀರ ಗಾಯ

0

ಮಂಗಳೂರಿನ ಆಸ್ಪತ್ರೆಗೆ ದಾಖಲು

ಸ್ಕೂಟಿ ಸ್ಕಿಡ್ ಆಗಿ ಬಿದ್ದು, ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ದ.ಕ. ಸಂಪಾಜೆ ಗ್ರಾಮದ ಕೈಪಡ್ಕದಲ್ಲಿ ಜು.26ರಂದು ರಾತ್ರಿ ಸಂಭವಿಸಿದೆ.

ಕೊಡಗು ಸಂಪಾಜೆ ಗ್ರಾಮದ ಪೆಟ್ರೋಲ್ ಪಂಪ್ ಬಳಿಯ ನಿವಾಸಿ ರಾಧಾಕೃಷ್ಣ( ಬಾಬೆ) ಎಂಬವರು ರಾತ್ರಿ ಕಲ್ಲುಗುಂಡಿಯಿಂದ ಸಂಪಾಜೆಯ ತನ್ನ ಮನೆಗೆ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಕೈಪಡ್ಕ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸ್ಕೂಟಿ ಪಲ್ಟಿಯಾಗಿದ್ದು, ರಾಧಾಕೃಷ್ಣ ಅವರ ತಲೆ, ಮುಖ ಹಾಗೂ ಕೈ – ಕಾಲುಗಳಿಗೆ ಗಂಭೀರವಾಗಿ ಗಾಯಗೊಂಡರೆನ್ನಲಾಗಿದೆ.
ಈ ವೇಳೆ ಸ್ಥಳೀಯರು ಸೇರಿ ಅವರನ್ನು ಅಂಬ್ಯುಲೆನ್ಸ್ ಮೂಲಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತಂದಾಗ, ತಲೆಗೆ ಗಂಭೀರ ಪ್ರಮಾಣದ ಗಾಯವಾಗಿರುವುದರಿಂದ ರಾತ್ರಿಯೇ ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿರುವುದಾಗಿ ತಿಳಿದುಬಂದಿದೆ.