ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ: ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಯೋಜನೆಯ ಜ್ಞಾನ ದೀಪ ಶಾಲಾ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಮಂಜೂರಾತಿ ಆದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರವನ್ನು ದುಗಲಡ್ಕದ ಕೊಯಿಕುಳಿ ಸ‌.ಹಿ. ಪ್ರಾ. ಶಾಲೆ ಮತ್ತು ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ.ಶಾಲೆಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಯತೀಶ್ ರೈ ದುಗಲಡ್ಕ , ಸೊಣಂಗೇರಿ ಒಕ್ಕೂಟದ ಅಧ್ಯಕ್ಷ ಗಿರಿಧರ ನಾಯರ್ ಹಿತ್ಲು : ದುಗಲಡ್ಕ ಒಕ್ಕೂಟದ ಅಧ್ಯಕ್ಷ ರಾಘವ ಆಚಾರ್ಯ, ಕುಕ್ಕುಜಡ್ಕ ಒಕ್ಕೂಟದ ಅಧ್ಯಕ್ಷ ಹರಿಶ್ಚಂದ್ರ, ಜಾಲ್ಸೂರು ವಲಯದ ಮೇಲ್ವಿಚಾರಕ ತೀರ್ಥರಾಮ, ಸೇವಾಪ್ರತಿನಿಧಿಗಳಾದ ಚಂದ್ರಪ್ರಕಾಶ್ ಪೈಲಾರು, ಶ್ರೀಮತಿ ಸೌಮ್ಯ, ಉಪಸ್ಥಿತರಿದ್ದರು.