ಸಜ್ಜನ ಪ್ರತಿಷ್ಠಾನ ವತಿಯಿಂದ ಬಂಟ್ವಾಳ್ ಮತ್ತು ಕುಕ್ಕೆಟ್ಟಿ ಯವರಿಗೆ ಸನ್ಮಾನ

0


ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ಪಾರ್ಮೇಡ್ ಕಂಪೆನಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕರಾಗಿ ನಿಯಕ್ತಿಗೊಂಡ ಹಿರಿಯ ಪತ್ರಕರ್ತ ಹರೀಶ್ ಬಂಟ್ವಾಳ್ ಕಳೇದ ನಲವತ್ತು ವರ್ಷಗಳಿಂದ ಪತ್ರಿಕೆ ರಂಗದಲ್ಲಿ ಸೇವೆಸಲ್ಲಿಸುತ್ತಿರುವ ಹಿರಿಯ ಪತ್ರಕರ್ತ ಜಯಪ್ರಕಾಶ್ ಕುಕ್ಕೆಟ್ಟಿ ಯವರಿಗೆ ಸಜ್ಜನ ಪ್ರತಿಷ್ಠಾನ ಅಧ್ಯಕ್ಷ ,ಪಾರ್ಮೆಡ್ ಪ್ರೈವೇಟ್ ಲಿಮಿಟೆಡ್ ಕಂಪನಿ ಹಿರಿಯ ಉಪಾಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ ಯವರು ಸನ್ಮಾನಿಸಿ ಗೌರವಿಸಿದರು.


ಈ ಸಂದರ್ಭದಲ್ಲಿ ಸಜ್ಜನ ಪ್ರತಿಷ್ಠಾನ ನಿರ್ದೇಶಕ,ಪಾರ್ಮೆಡ್ ಪ್ರೈವೇಟ್ ಲಿಮಿಟೆಡ್ ಕಂಪನಿ ‌ವ್ಯವಸ್ಥಾಪಕ ಆರೀಸ್ ಪೇರಡ್ಕ,ನಿರ್ದೇಶಕ ಮಂಜುನಾಥ್ ಹಿರಿಯೂರು, ಪತ್ರಕರ್ತ ಶರೀಫ್ ಜಟ್ಟಿಪಳ್ಳ ಉಪಸ್ಥಿತರಿದ್ದರು.