ಆ.1ರಂದು ಬೆಳ್ಳಾರೆಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಅಂಚೆ ಜನ ಸಂಪರ್ಕ ಅಭಿಯಾನ

0


ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ,ಉಪವಿಭಾಗ ಸುಳ್ಯ ಮತ್ತು ಬೆಳ್ಳಾರೆಯ ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಅಂಚೆ ಜನ ಸಂಪರ್ಕ ಅಭಿಯಾನ ಆ.1ರಂದು ಬೆಳ್ಳಾರೆಯ ಗ್ರಾಮ ಪಂಚಾಯತ್ ಕಟ್ಟಡದ ರಾಜೀವ ಗಾಂಧೀ ಸೇವಾ ಕೇಂದ್ರದಲ್ಲಿ ನಡೆಯಲಿದೆ. ಹೊಸ ಆಧಾರ್ ನೋಂದಣಿ, ಆಧಾರ್ ತಿದ್ದುಪಡಿ ಮತ್ತು ಅಪ್ ಡೇಟ್ ಸೇವೆಗಳು ಶಿಬಿರದಲ್ಲಿ ನಡೆಯಲಿದ್ದು, ಸಮಗ್ರ ರಕ್ಷಾ ಯೋಜನೆಯ ಅಪಘಾತ ವಿಮೆ ಯ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅದೀಕ್ಷಕ ಹರೀಶ್ ಜಿ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ. ಆಧಾರ್ ನೋಂದಣಿ ಮತ್ತು ತಿದ್ದುಪಡಿ ಮಾಡಲಿಚ್ಚಿಸುವವರು ಜು. 31ರೊಳಗೆ ಬೆಳ್ಳಾರೆಯ ಬಸ್ ನಿಲ್ದಾಣದ ಎದುರಿನ ಜ್ಞಾನದೀಪ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯಲ್ಲಿ ಹೆಸರು ನೋಂದಾಯಿಸಿ ಅರ್ಜಿ ಪಡೆದುಕೊಳ್ಳುವುದು. ಆ. 1ರಂದು ಬೆಳಿಗ್ಗೆ 9ಗಂಟೆಯಿಂದ 10.00ಗಂಟೆಯವರೆಗೆ ಟೋಕನ್ ವಿತರಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.