ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಬೆಳ್ಳಾರೆ ಸರಕಾರಿ ಶಾಲಾ ಆವರಣದಲ್ಲಿ ವನಮೋತ್ಸವ ಆಚರಣೆ

0

ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಬೆಳ್ಳಾರೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮೋತ್ಸವ ಜು.26 ರಂದು ಆಚರಿಸಲಾಯಿತು.

ಪಂಜ ವಲಯ ಅರಣ್ಯ ಅಧಿಕಾರಿ ಗಿರೀಶ್ ಹಣ್ಣಿನ ಗಿಡವನ್ನು ನೆಡುವ ಮೂಲಕ ವನಮೋತ್ಸವ ಆಚರಣೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಾಮಕೃಷ್ಣ ರೈ ಅಧ್ಯಕ್ಷತೆ ವಹಿಸಿದ್ದರು.


ಲಯನ್ ಗಂಗಾಧರ್ ರೈ, ಲಯನ್ ರೇಣುಕಾ ಸದಾನಂದ ಜಾಕೆ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷ ಹರೀಶ್, ಮುಖ್ಯ ಶಿಕ್ಷಕಿ ಪ್ರೇಮವೇದಿಕೆಯಲ್ಲಿದ್ದರು. ಸಂಚಾಲಕ ಲಯನ್ ಚಂದ್ರಶೇಖರ ನಂಜೆ ಪ್ರಾಸ್ತಾವಿಕ ಮಾತನಾಡಿದರು. ಶಾಲಾ ಮಕ್ಕಳಿಗೆ ಏರ್ಪಡಿಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಲಯನ್ ರಾಮಚಂದ್ರ ಪಲ್ಲ ತಡ್ಕ ವಂದಿಸಿದರು. ಶಿಕ್ಷಕಿ ಶ್ವೇತ ಕಾರ್ಯಕ್ರಮ ನಿರೂಪಿಸಿದರು. ಲಯನ್ಸ್ ಪದಾಧಿಕಾರಿಗಳು ಮತ್ತು ಸದಸ್ಯರು, ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರು, ಮತ್ತು ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.