ಪಂಜ ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್

0

ಲಯನ್ಸ್ ಕ್ಲಬ್ ಪಂಜ ಇದರ ಆಶ್ರಯದಲ್ಲಿ ಕಾರ್ಗಿಲ್ ದಿವಸ್ ಜು.27ರಂದು ಪಂಜ ಲಯನ್ಸ್ ಭವನದಲ್ಲಿ ನಡೆಯಿತು.

ಭಾರತೀಯ ಸೇನೆಯ ಮಾಜಿ ಸೈನಿಕ ಲಕ್ಷ್ಮಣ್ ಬೇರ್ಯ ರವರನ್ನು ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಜಾಕೆ ಮಾಧವ ಗೌಡ ರವರು ಸನ್ಮಾನಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ್ ಪಳಂಗಾಯ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮೋಹನ್ ದಾಸ್ ಕೂಟಾಜೆ, ಕೋಶಾಧಿಕಾರಿ ಸುರೇಶ್ ಕುಮಾರ್ ನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕ್ಲಬ್ ನ ಸದಸ್ಯ ಸೀತಾರಾಮ ಗೌಡ ಕುದ್ವ ರವರು ಗಂಗೋತ್ರಿ, ಯಮೂನೋತ್ರಿ, ಕೇದಾರನಾಥ್,ಬದ್ರಿನಾಥ್ ಯಾತ್ರೆ ಮಾಡಿದ್ದು ಆ ಕುರಿತು ಅವರು ಅನಿಸಿಕೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಶಿಧರ ಪಳಂಗಾಯ ಸ್ವಾಗತಿಸಿದರು. ಮೋಹನ್ ದಾಸ್ ಕೂಟಾಜೆ ವಂದಿಸಿದರು.