ಕುಕ್ಕುಜಡ್ಕದಲ್ಲಿ ಒಡಿಯೂರು ಸ್ವಾಮೀಜಿ ಜನ್ಮದಿನೋತ್ಸವದ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

0

ಒಡಿಯೂರು ಗ್ರಾಮ ವಿಕಾಸ ಯೋಜನೆಯ ವತಿಯಿಂದ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮ ದಿನೋತ್ಸವದ ಅಂಗವಾಗಿ ಕುಕ್ಕುಜಡ್ಕ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಜು.28 ರಂದು ಹಮ್ಮಿಕೊಳ್ಳಲಾಯಿತು.


ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ ಪೈಲೂರು, ಗುರುದೇವಾ ಸೇವಾ ಬಳಗದ ಅಧ್ಯಕ್ಷ ಪದ್ಮನಾಭ ಬೊಳ್ಳೂರು, ಪಿಲಿಕಜೆ ಧರ್ಮಶಾಸ್ತಾ ಭಜನಾ ಮಂದಿರದ ಕಾರ್ಯಾಧ್ಯಕ್ಷ ಗಣೇಶ ಪಿಲಿಕಜೆ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪುಂಡರೀಕ‌ ಚಿಲ್ಪಾರು, ಪಂಚಾಯತ್ ಪಿ.ಡಿ.ಒ ದಯಾನಂದ ಪತ್ತುಕುಂಜ, ಪಂ.ಸದಸ್ಯ ಜನಾರ್ದನ ಪೈಲೂರು,
ಸೇವಾ ದೀಕ್ಷಿತೆ ಪ್ರಿಯಾ, ಸೇವಾ ಸಂಯೋಜಕಿ ಸರಿತಾ ಉಪಸ್ಥಿತರಿದ್ದರು.
ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲರಿಗೂ ಉಪಹಾರದ ವ್ಯವಸ್ಥೆಯನ್ನು ಪುಂಡರೀಕ ಚಿಲ್ಪಾರು ರವರು ಒದಗಿಸಿದರು. ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.