ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

0

ಅಧ್ಯಕ್ಷ – ಲೋಕೇಶ್ ಪೆರ್ಲಂಪಾಡಿ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2024-25 ನೇ ಸಾಲಿನ ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ, ಕಾರ್ಯದರ್ಶಿಯಾಗಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಪುಷ್ಪರಾಜ್ ಶೆಟ್ಟಿ ಆಯ್ಕೆಯಾದರು.

ಜು.29ರಂದು ಪ್ರೆಸ್ ಕ್ಲಬ್ ನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ದಯಾನಂದ ಕಲ್ನಾರ್, ಉಪಾಧ್ಯಕ್ಷರಾಗಿ ಪ್ರಜ್ಞಾ ಎಸ್. ನಾರಾಯಣ ಅಚ್ರಪ್ಪಾಡಿ, ಜತೆ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಕೇರ್ಪಳ, ನಿರ್ದೇಶಕರುಗಳಾಗಿ ಮಿಥುನ್ ಕರ್ಲಪ್ಪಾಡಿ, ಪದ್ಮನಾಭ ಅರಂಬೂರು, ಜಯದೀಪ್ ಕುದ್ಕುಳಿ, ಪದ್ಮನಾಭ ಮುಂಡೋಕಜೆ, ತೇಜೇಶ್ವರ ಕುಂದಲ್ಪಾಡಿ, ಮುರಳೀಧರ ಅಡ್ಡನಪಾರೆ , ಗೌರವ ಸಲಹೆಗಾರರಾಗಿ ದುರ್ಗಾಕಮಾರ್ ನಾಯರ್ ಕೆರೆ, ಜೆ.ಕೆ.ರೈ, ಗಂಗಾಧರ ಮಟ್ಟಿ, ದಯಾನಂದ ಕೊರತ್ತೋಡಿ, ಗಂಗಾಧರ ಕಲ್ಲಪಳ್ಳಿ, ಕೃಷ್ಣ ಬೆಟ್ಟ, ಗಿರೀಶ್ ಪೆರುಮುಂಡ, ಆಂತರಿಕ ಲೆಕ್ಕಪರಿಶೋಧಕರಾಗಿ ಜಯಪ್ರಕಾಶ್ ಕುಕ್ಕೆಟ್ಟಿ ಆಯ್ಕೆಯಾದರು.

ಮಹಾಸಭೆ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್ ವಹಿಸಿದ್ದರು. ಕಾರ್ಯದರ್ಶಿ ತೇಜೇಶ್ವರ ಕುಂದಲ್ಪಾಡಿ ವರದಿ ಮಂಡಿಸಿದರು. ಕೋಶಾಧಿಕಾರಿ ಪ್ರಜ್ಞಾ ಎಸ್. ನಾರಾಯಣ ಲೆಕ್ಕಪತ್ರ ಮಂಡಿಸಿದರು.