ಕೊಡಿಯಾಲಬೈಲು : ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ

0

ಸುಳ್ಯ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹಾಗೂ ಕಾರ್ಗಿಲ್ ಯುದ್ಧದಲ್ಲಿ ವೀರಸ್ವರ್ಗವನ್ನು ಪಡೆದ ಯೋಧರಿಗೆ ಅರ್ಪಿತವಾಗಿ ಸಾಮಾಜಿಕ ಸೇವಾ ಸಂಕಲ್ಪದೊಂದಿಗೆ ಶ್ರಮದಾನ ಕಾರ್ಯಕ್ರಮವು ಜುಲೈ ೨೮ ರಂದು ಕೊಡಿಯಾಲಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ ಪನ್ನೆಯವರ ನೇತೃತ್ವದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ನಿವೃತ್ತ ಸೈನಿಕ ಲೋಕೇಶ್ ಇರಂತಮಜಲುರನ್ನು ಗೌರವಿಸಲಾಯಿತು.
ಉಬರಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು ಶ್ರಮದಾನಕ್ಕೆ ಚಾಲನೆ ನೀಡಿದರು.


ಶ್ರಮದಾನದಲ್ಲಿ ಉಬರಡ್ಕ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಮಮತಾ ಕುದ್ಪಾಜೆ, ಶಾಲಾಭಿವೃದ್ಧಿ ಸಮಿತಿಯು ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಕೊಡಿಯಾಲಬೈಲು, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸವಿತಾ ಸುಬ್ಬಯ್ಯ, ಶಾಲಾ ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಶಾಲಾ ಮಕ್ಕಳ ಪೋಷಕರು, ಅಕ್ಷರ ದಾಸೋಹದ ಸಿಬ್ಬಂದಿಗಳು, ಹಾಗೂ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ಸಮುದಾಯ ಬಾಂಧವರು ಪಾಲ್ಗೊಂಡರು.