ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿ ಉತ್ಸವ

0

ಗೌರವ ಸನ್ಮಾನ – ಆಟಿ ಭೋಜನ ಕೂಟ ಹಾಗೂ ಸ್ಪರ್ಧಾ ಕಾರ್ಯಕ್ರಮ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿ ಉತ್ಸವ , ಗೌರವ ಸನ್ಮಾನ ಹಾಗೂ ಆಟಿ ಭೋಜನಕೂಟವು ಸುಳ್ಯದ ಶ್ರೀಹರಿ ವಾಣಿಜ್ಯ ಸಂಕೀರ್ಣದಲ್ಲಿರುವ ರಂಗಮಯೂರಿ ಕಲಾಶಾಲೆಯಲ್ಲಿ ಜು.31ರಂದು ನಡೆಯಿತು.

ಕೆ.ಜೆ.ಯು. ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಈಶ್ವರ ವಾರಣಾಶಿ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿ, ಶುಭಹಾರೈಸಿದರು.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ‌.ಕ. ಜಿಲ್ಲಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ತುಳು ಸಾಹಿತ್ಯಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ತೆಂಗಿನ ಹಿಂಗಾರವನ್ನು ಅರಳಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸುಳ್ಯದ ಪ್ರೆಸ್ ಕ್ಲಬ್ ಅಧ್ಯಕ್ಷರು , ಕೆ.ಜೆ.ಯು. ದ.ಕ. ಜಿಲ್ಲಾ ಗೌರವಾಧ್ಯಕ್ಷರು ಹಾಗೂ ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕರಾದ ಹರೀಶ್ ಬಂಟ್ವಾಳ್ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಪಿ. ಬಿ. ಹರೀಶ್ ರೈ , ಹಿರಿಯ ನಾಟ್ಯ ವೈದ್ಯರಾದ ರಾಮಣ್ಣ ನಾಯ್ಕ ನೀರಬಿದಿರೆ ಅವರನ್ನು ಕೆ.ಜೆ‌.ಯು. ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾದ ಸದಾನಂದ ಮಾವಜಿ, ಅರೆಭಾಷೆ ಅಕಾಡೆಮಿ ಸದಸ್ಯರುಗಳಾದ ಲೋಕೇಶ್ ಊರುಬೈಲು, ಶ್ರೀಮತಿ ಚಂದ್ರಾವತಿ ಬಡ್ಡಡ್ಕ ಅವರನ್ನು ಕೆ.ಜೆ.ಯು. ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮದ ಕೊನೆಯಲ್ಲಿ ಸುದ್ದಿ ಜನಾಂದೋಲನ ವೇದಿಕೆ ವತಿಯಿಂದ ಮತದಾರರರ ಜಾಗೃತಿಗಾಗಿ ನಡೆಸಲ್ಪಡುವ ಲಂಚ – ಭ್ರಷ್ಟಾಚಾರ ವಿರೋಧಿ ಫಲಕದ ಘೋಷಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕೇರಳದ ವಯನಾಡು ಭೂಕುಸಿತದಿಂದ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ವೇದಿಕೆಯಲ್ಲಿ ಕೆ.ಜೆ.ಯು. ದ.ಕ. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ, ಜಿಲ್ಲಾ ಘಟಕದ ಕೋಶಾಧಿಕಾರಿ ಗಿರಿಧರ ಶೆಟ್ಟಿ, ಸುಳ್ಯ ತಾಲೂಕು ಘಟಕದ ಗೌರವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಕಾರ್ಯದರ್ಶಿ ಜಯಶ್ರೀ ಕೊಯಿಂಗೋಡಿ, ಕೋಶಾಧಿಕಾರಿ ವಿನಯ್ ಜಾಲ್ಸೂರು ಉಪಸ್ಥಿತರಿದ್ದರು. ಸುಳ್ಯ ತಾಲೂಕು ಘಟಕದ ನಿರ್ದೇಶಕ ಶಿವರಾಮ ಕಜೆಮೂಲೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಜಯಶ್ರೀ ಕೊಯಿಂಗೋಡಿ ವಂದಿಸಿದರು.ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.

ಮಧ್ಯಾಹ್ನ ಆಟಿಯ ತಿಂಡಿ – ತಿನಿಸುಗಳ ವಿಶೇಷ ಸಹಭೋಜನ ನಡೆಯಿತು. ಬಳಿಕ ಕೆ.ಜೆ.ಯು. ಸುಳ್ಯ ಘಟಕದ ವತಿಯಿಂದ ಪುರುಷರಿಗೆ, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.