ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿ ಅವ್ಯವಸ್ಥೆ

0

ಮುಖ್ಯರಸ್ತೆಯಲ್ಲಿ ಹೊಳೆಯಂತೆ ಹರಿಯುತ್ತಿರುವ ಮಳೆನೀರು

ದ್ವಿಚಕ್ರ ಸೇರಿದಂತೆ ವಾಹನ ಸವಾರರ ಪರದಾಟ

ಬೊಳುಬೈಲಿನಲ್ಲಿ ಪ್ರವಾಹದ ಪರಿಸ್ಥಿತಿ

ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಗ್ರಾಮದ ಬೊಳುಬೈಲು, ಅಡ್ಕಾರು ಮತ್ತಿತರ ಕಡೆಗಳಲ್ಲಿ ಅವ್ಯವಸ್ಥಿತ ಚರಂಡಿಯಿಂದಾಗಿ ಜೋರಾಗಿ ಮಳೆ ಬರುವ ಸಂದರ್ಭದಲ್ಲಿ ಮಳೆ ನೀರು ಮುಖ್ಯರಸ್ತೆಯಲ್ಲಿ ಹೊಳೆಯಂತೆ ಹರಿಯುತ್ತಿದ್ದು, ದ್ವಿಚಕ್ರ ಸೇರಿದಂತೆ ವಾಹನ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ‌.

ಬೊಳುಬೈಲಿನಲ್ಲಿ ರಸ್ತೆಯ ಎರಡೂ ಕಡೆಗಳಲ್ಲಿ ಚರಂಡಿ ಅವ್ಯವಸ್ಥೆಯಿಂದ ಕೂಡಿದ್ದು, ಸದ್ಯ ಮಳೆ ನೀರು ಮುಖ್ಯ ರಸ್ತೆಯ ತುಂಬ ಆವರಿಸಿ, ಪ್ರವಾಹದ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಅಡ್ಕಾರಿನ ಅಯ್ಯಪ್ಪ ಮಂದಿರ, ಅಡ್ಕಾರು ಶಾಲಾ ಬಳಿ ಮುಖ್ಯರಸ್ತೆಯಲ್ಲೇ ನೀರು ಹರಿಯುತ್ತಿದ್ದು, ವಾಹನ ಪ್ರಯಾಣಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.