ಆ. 4 : ಅಮರ ಸಂಘಟನಾ ಸಮಿತಿ ವತಿಯಿಂದ ನಾಳೆ ಪೈಲಾರಿನಲ್ಲಿ ಉಚಿತ ಸ್ಕೂಲ್ ಬ್ಯಾಗ್, ಕೊಡೆ ವಿತರಣೆ ಹಾಗೂ ನಿವೃತ್ತ ಸೈನಿಕರಿಗೆ ಸನ್ಮಾನ

0

ಅಮರ ಸಂಘಟನಾ ಸಮಿತಿ ಸುಳ್ಯ ಇದರ ವತಿಯಿಂದ 25 ನೇ ವರ್ಷದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಪೈಲಾರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್, ಕೊಡೆ ವಿತರಣೆ ಹಾಗೂ ನಿವೃತ್ತ ಸೈನಿಕರಿಗೆ ಸನ್ಮಾನ ಕಾರ್ಯಕ್ರಮವು ಆ. 4 ರಂದು ಪೈಲಾರು ಶಾಲಾ ವಠಾರದಲ್ಲಿ ನಡೆಯಲಿದೆ.

ಅಮರ ಸಂಘಟನಾ ಸಮಿತಿ ಅಧ್ಯಕ್ಷ ಸಾತ್ವಿಕ್ ಮಡಪ್ಪಾಡಿ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು ನಿವೃತ್ತ ಸೈನಿಕ‌ ಸುಬೇದಾರ್ ರಘುಪತಿ ಯು.ಎಂ. ಉದ್ಘಾಟಿಸಲಿದ್ದಾರೆ.

ಕರ್ನಾಟಕ ರಾಜ್ಯ ಗ್ರಂಥಾಲಯ ನೌಕರರ ಸಂಘದ ಕಾರ್ಯದರ್ಶಿ ಶ್ರೀಮತಿ ಸಾವಿತ್ರಿ ಕಣೆಮರಡ್ಕ ಪ್ರಧಾನ ಭಾಷಣ ಮಾಡಲಿದ್ದಾರೆ.

ಗ್ರಾಮದ ನಿವೃತ್ತ ಸೈನಿಕರಾದ ಸಂಜೀವ ಮದುವೆಗದ್ದೆ, ಗಂಗಾಧರ ಬಾಕಿಲಾಡಿ, ಶಿವರಾಮ ಗೌಡ ಎಸ್. ಅವರನ್ನು ಸುಳ್ಯ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ ಸನ್ಮಾನಿಸಲಿದ್ದಾರೆ.

ಧರ್ಮಸ್ಥಳ ಗ್ರಾಮಾಭಿವೃದ್ದಿ ಒಕ್ಕೂಟದ ಪೈಲಾರು ಘಟಕದ ಅಧ್ಯಕ್ಷ ದಯಾನಂದ ಗುಡ್ಡೆಮನೆ, ಪ್ರಗತಿಪರ ಕೃಷಿಕ ಜಯಶಿವ ಮಡಪ್ಪಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಪ್ರಸಾದ್ ಮಾಡಬಾಕಿಲು, ಜಯಪ್ರಕಾಶ್ ದೊಡ್ಡಿಹಿತ್ಲು, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ದೇವಕಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚಂದ್ರಾವತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.