ದೇವಚಳ್ಳ : ಸಂಪೂರ್ಣ ಸುರಕ್ಷಾ ಚೆಕ್ ವಿತರಣಾ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಚೈತನ್ಯ ಸಂಘದ ಸದಸ್ಯೆ ಯಶೋಧ ಎಂಬವರ ಅನಾರೋಗ್ಯ ನಿಮಿತ್ತ ಸಂಪೂರ್ಣ ಸುರಕ್ಷಾ ಯೋಜನೆಯಡಿಯಲ್ಲಿ ಮಂಜೂರಾದ
ರೂ. 4800/- ಮೊತ್ತದ ಚೆಕ್ ನ್ನು ವಿತರಿಸಲಾಯಿತು.

ಮಾವಿನಕಟ್ಟೆ ಒಕ್ಕೂಟದ ಅಧ್ಯಕ್ಷ ಭಾನುಪ್ರಕಾಶ್, ಉಪಾಧ್ಯಕ್ಷ ಸತೀಶ್ ಕುಲಾಲ್ ರವರು ಚೆಕ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸದಸ್ಯ ವೇಣುಗೋಪಾಲ ಪಿ ಜೆ, ವಲಯ ಮೇಲ್ವಿಚಾರಕಿ ಬಾಲಕೃಷ್ಣ ಗೌಡ ರವರು ಉಪಸ್ಥಿತರಿದ್ದರು.