ಸ. ಸಂಘಗಳ ಸ. ನಿಬಂಧಕರಾದ ಶ್ರೀಮತಿ ತ್ರಿವೇಣಿ ರಾವ್ ವರ್ಗವಣೆ⬆️ಸುಳ್ಯದಲ್ಲಿ ಬೀಳ್ಕೊಡುಗೆ ಸಮಾರಂಭ

0
ಪುತ್ತೂರು ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿದ್ದ  ಶ್ರೀಮತಿ ತ್ರಿವೇಣಿ ರಾವ್ ರವರು ವರ್ಗಾವಣೆಗೊಂಡಿದ್ದು ಅವರಿಗೆ ಬೀಳ್ಕೊಡುಗೆ ಸಮಾರಂಭವು ಸುಳ್ಯ ತಾಲೂಕು ಸಹಕಾರ ಸಂಘಗಳ ವತಿಯಿಂದ ಸುಳ್ಯ ಪ್ರಾ.ಕೃ.ಪ.ಸ.ಸಂಘದ ಸಭಾಭವನದಲ್ಲಿ ಆ. 6 ರಂದು ಜರುಗಿತು.

ಸುಳ್ಯ ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಸಭಾಧ್ಯಕ್ಷತೆ ವಹಿಸಿದ್ದರು.
ದ .ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸನ್ಮಾನಿಸಿ ಶುಭ ಹಾರೈಸಿದರು.

ನೂತನ ಪುತ್ತೂರು ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ರಘು ಎಸ್ ಎಂ ರವರನ್ನು ಗೌರವಾರ್ಪಣೆ ಮಾಡಿ ಸ್ವಾಗತಿಸಲಾಯಿತು.
ಅರಂತೋಡು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಸುಳ್ಯ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವಿಕ್ರಂ, ಸುಳ್ಯ ಡಿ ಸಿ ಸಿ ಬ್ಯಾಂಕ್ ವ್ಯವಸ್ಥಾಪಕ ಚಂದ್ರಪ್ರಕಾಶ್ ಕಂಬಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಪುತ್ಯ, ಮನೋಜ್ ಕುಮಾರ್ , ಪ್ರದೀಪ್ ಕುಮಾರ್ , ರಂಜಿತ್ ಮತ್ತು ಸುಳ್ಯ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪಂಜ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ಸ್ವಾಗತಿಸಿದರು. ಪಂಬೆತ್ತಾಡಿ ಪ್ರಾ.ಕೃ.ಪ.ಸ. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುರುಷೋತ್ತಮ ಶೆಟ್ಟಿ ನಿರೂಪಿಸಿದರು. ಉಬರಡ್ಕ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ವಂದಿಸಿದರು.