ಗಾಂಧಿ‌ ಚಿಂತನ ವೇದಿಕೆ ವತಿಯಿಂದ ಡಾ. ಕುರುಂಜಿ ಪುತ್ಥಳಿಗೆ ಹಾರಾರ್ಪಣೆ

0

ಸುಳ್ಯದ ಅಮರ ಶಿಲ್ಪಿ, ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಸ್ಥಾಪಕ ಡಾ. ಕುರುಂಜಿ ವೆಂಕಟ್ರಮಣ ಗೌಡರ 11 ನೇ ಪುಣ್ಯತಿಥಿಯ ದಿನವಾದ ಆ.7ರಂದು ಗಾಂಧಿ ಚಿಂತನ ವೇದಿಕೆ ವತಿಯಿಂದ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಡಾ.ಕುರುಂಜಿ ಪುತ್ಥಳಿಗೆ ಮಾಲಾರ್ಪಣಾ ಕಾರ್ಯಕ್ರಮ ನಡೆಯಿತು.

ಗಾಂಧಿ‌ ಚಿಂತನಾ ವೇದಿಕೆಯ ಸಂಚಾಲಕ, ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್‌ ಬಂಟ್ವಾಳ್ ಡಾ.ಕುರುಂಜಿಯವರ ಕುರಿತು ಮಾತನಾಡಿ, ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಸುಳ್ಯ ತಾಲೂಕು ಜರ್ನಲಿಸ್ಟ್ ಯೂನಿಯನ್ ಪರವಾಗಿ ಸಂಘದ ಅಧ್ಯಕ್ಷ ಈಶ್ವರ ವಾರಣಾಸಿ ಮಾಲಾರ್ಪಣೆ ಮಾಡಿದರು.

ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಡಾ.ಎನ್‌.ಎ.ಜ್ಞಾನೇಶ್, ಎಂ.ಜಿ.ಎಂ.ಶಾಲಾ ಸಂಚಾಲಕ ದೊಡ್ಡಣ್ಣ ಬರೆಮೇಲು, ನ್ಯಾಯವಾದಿ ದಿನೇಶ್ ಅಂಬೆಕಲ್ಲು, ಪ್ರೆಸ್ ಕ್ಲಬ್ ಕ್ಲಬ್ ಉಪಾಧ್ಯಕ್ಷ ಜೆ.ಕೆ.ರೈ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷೆ ಶ್ರೀಮತಿ ಪ್ರಜ್ಞಾ ಎಸ್.ನಾರಾಯಣ್, ಪ್ರಧಾನ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ, ಶರೀಫ್ ಜಟ್ಟಿಪಳ್ಳ, ಗಣೇಶ್ ಕುಕ್ಕುದಡಿ, ಶ್ರೀಮತಿ ಹರ್ಷಿತಾ ವಿನಯ್ ಬೆದ್ರುಪಣೆ, ಶ್ರೀಮತಿ ಪೂಜಾಶ್ರೀ ವಿತೇಶ್ ಕೋಡಿ, ಶಿವಪ್ರಸಾದ್ ಕೇರ್ಪಳ, ಗ್ರೀಷ್ಮ ಇದ್ದರು.

ಹರೀಶ್ ಬಂಟ್ವಾಳ್ ಕಾರ್ಯಕ್ರಮ ನಿರ್ವಹಿಸಿದರು. ಸುದ್ದಿ ಬಿಡುಗಡೆ ವರದಿಗಾರ ಶಿವಪ್ರಸಾದ್ ಆಲೆಟ್ಟಿ ವಂದಿಸಿದರು.