ಬಳ್ಪ: ಮೂರು ದಿನ ಕಳೆದರು ಯುವಕನ ಪತ್ತೆಯಿಲ್ಲ

0

ಇಂದು ಸುಳ್ಯದ ಮುಳುಗು ತಜ್ಞರಿಂದ ತೀವ್ರ ಶೋಧ

ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33ವ)ಎಂಬ ಯುವಕ ಆ.4 ರಂದು ಮನೆಯಿಂದ ನಾಪತ್ತೆಯಾಗಿದ್ದು ಮೂರು ದಿನ ಕಳೆದರೂ ಯಾವುದೇ ಸುಳಿವು ಇಲ್ಲ.

ಇಂದು (ಆ.7 )ರಂದು ಸುಳ್ಯದ ಮುಳುಗು ತಜ್ಞರು ಹೊಳೆಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

ಆ.6.ಗುಂಡ್ಯದ ಮುಳುಗು ತಜ್ಞರು ಹುಡುಕಾಟ ನಡೆಸಿದ್ದರು. ಇಂದು ಮುಂಜಾನೆಯಿಂದ ಯುವಕನ ಮನೆ ಸಮೀಪದ ಹೊಳೆಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.
ಸುಳ್ಯದ ಮುಳುಗು ತಜ್ಞರ ತಂಡದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಪ್ರಗತಿ ಅಂಬ್ಯುಲೆನ್ಸ್ ನ ಅಬ್ದುಲ್ ರಜಾಕ್ (ಅಚ್ಚು), ಚಿದಾನಂದ ಗೂನಡ್ಕ , ಶ್ರೀ ಮುತ್ತಪ್ಪನ್ ಅಂಬ್ಯುಲೆನ್ಸ್ ನ ಅಭಿ ಸುಳ್ಯ ಇದ್ದಾರೆ. ಊರವರು , ಸಂಬಂಧಿಕರು ,ನಿಂತರ ಹುಡುಕಾಟ ನಡೆಸುತ್ತಿದ್ದು, ಸಹಕರಿಸುತ್ತಿದ್ದಾರೆ. ಸುಬ್ರಹ್ಮಣ್ಯ ಪೋಲೀಸ್ ರು ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದಿದ್ದಾರೆ.