ಬಳ್ಪ: ಯುವಕನ ಶವ ಹೊಳೆಯಲ್ಲಿ ಪತ್ತೆ

0

ಕಳೆದ ಮೂರು ದಿನಗಳಿಂದ ತಜ್ಞರಿಂದ ತೀವ್ರ ಶೋಧ ಕಾರ್ಯ

ಪಂಜ ಹೊಳೆಯ‌ಲ್ಲಿ ಮೃತ ದೇಹ ಪತ್ತೆ

ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತ ದೇಹ ಇಂದು ಪತ್ತೆಯಾಗಿದೆ.

ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33ವ)ಎಂಬ ಯುವಕ ಆ.4.ರಂದು ಮನೆಯಿಂದ ನಾಪತ್ತೆಯಾಗಿದ್ದು ಮೂರು ದಿನದ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಪಂಜ ಹೊಳೆಯ ಪಲ್ಲೋಡಿ ಅಡ್ಕದಲ್ಲಿ ಆ.7 ರಂದು ಮಧ್ಯಾಹ್ನ ವೇಳೆಗೆ ಮೃತ ದೇಹವನ್ನು ಮುಳುಗು ತಜ್ಞರು ಪತ್ತೆ‌ ಹಚ್ಚಿದ್ದಾರೆ.

ಸುಳ್ಯದ ಮುಳುಗು ತಜ್ಞರು ಹೊಳೆಯಲ್ಲಿ ಹುಡುಕಾಟ ನಡೆಸಿ ಮೃತ ದೇಹ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಸುಳ್ಯದ ಮುಳುಗು ತಜ್ಞರ ತಂಡ ಸಂಪಾಜೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಪ್ರಗತಿ ಅಂಬ್ಯುಲೆನ್ಸ್ ನ ಅಬ್ದುಲ್ ರಜಾಕ್ (ಅಚ್ಚು), ಚಿದಾನಂದ ಗೂನಡ್ಕ , ಶ್ರೀ ಮುತ್ತಪ್ಪನ್ ಅಂಬ್ಯುಲೆನ್ಸ್ ನ ಅಭಿ ಸುಳ್ಯ ಪಾಲ್ಗೊಂಡಿದ್ದರು. ಊರವರು , ಸಂಬಂಧಿಕರು ,ನಿಂತರ ಹುಡುಕಾಟ ನಡೆಸಿ, ಸಹಕರಿಸಿದ್ದಾರೆ .ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ.6.ಗುಂಡ್ಯದ ಮುಳುಗು ತಜ್ಞರು ಹುಡುಕಾಟ ನಡೆಸಿದ್ದರು. ಇಂದು ಮುಂಜಾನೆಯಿಂದ ಯುವಕನ ಮನೆ ಸಮೀಪದ ಹೊಳೆಯಲ್ಲಿ ಹುಡುಕಾಟ ನಡೆದಿತ್ತು.