ಸಂಪಾಜೆ: ಸಹಾಯಕ ಕಮಿಷನರ್ ಜುಬಿನ್ ಮೊಹಪಾತ್ರ ಭೇಟಿ

0

ಭೂಕುಸಿತ ಪ್ರದೇಶಗಳ ಬಗ್ಗೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ

ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮೊಹಪಾತ್ರ ಅವರು ದ.ಕ. ಸಂಪಾಜೆ ಗ್ರಾಮಕ್ಕೆ ಭೇಟಿ ನೀಡಿ ರಸ್ತೆ, ಸೇತುವೆ ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ಮನವಿ ಸ್ವೀಕರಿಸಿದರು.

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೂನಡ್ಕ ಪೇರಡ್ಕ ರಸ್ತೆಯಲ್ಲಿ ಸಂಪರ್ಕ ಕಲ್ಪಿಸುವ ದರ್ಕಾಸ್ ಮುಳುಗು ಸೇತುವೆ ಮಳೆಗಾಲದಲ್ಲಿ ಪಯಸ್ವಿನಿ ನದಿಯಲ್ಲಿ ಪ್ರವಾಹ ಹೆಚ್ಚಾದಾಗ ಆಗಾಗ ಮುಳುಗಡೆಯಗುತ್ತಿದ್ದು ಈ ರಸ್ತೆಯಲ್ಲಿ ನೂರಾರು ಶಾಲಾ ವಿದ್ಯಾರ್ಥಿಗಳು,ಸಾರ್ವಜನಿಕರು ನಿತ್ಯ ಸಂಚಾರ ಮಾಡುತ್ತಿರುವ ಕಾರಣದಿಂದ ನೂರಾರು ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿ ಹಾಗೂ ಹೊಸ ಸೇತುವೆ ನಿರ್ಮಾಣ ಹಾಗೂ ಬದಲಿ ರಸ್ತೆಯಲ್ಲಿ ಸಂಚಾರ ಮಾಡಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಪ್ರಾಕೃತಿಕ ವಿಕೋಪದಿಂದ ಹದಗೆಟ್ಟ ಗ್ರಾಮದ ರಸ್ತೆಗಳಿಗೆ ಅನುದಾನ ದೊರಕಿಸಿಕೊಡುವಂತೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ರವರು ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮಹೋಪಾತ್ರ ರವರಿಗೆ ಸೇತುವೆ ಭೇಟಿ ಸ್ಥಳದಲ್ಲಿ ಮನವಿ ಸಲ್ಲಿಸಿದರು.

ಸಹಾಯಕ ಕಮಿಷನರ್ ಅವರು ಸ್ಥಳ ಪರಿಶೀಲನೆ ನಡೆಸಿ ಸರಕಾರ ಹಾಗೂ ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ಹಾಗೂ ಅಗತ್ಯ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರೆಂದು ತಿಳಿದುಬಂದಿದೆ.

ಮಳೆಗಾಲದಲ್ಲಿ ಭೂಕುಸಿತ ಪ್ರದೇಶಗಳ ಬಗ್ಗೆ ಎಚ್ಚರ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಎ.ಸಿ. ಅವರು ಸೂಚಿಸಿದರು

.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್.ಕೆ.ಹನೀಫ್, ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ, ಸದಸ್ಯರಾದ ಪಿ.ಕೆ.ಅಬೂಸಾಲಿ ಗೂನಡ್ಕ, ಭೂಗಣಿ ಇಲಾಖೆಯ ಅದಿಕಾರಿ ಶ್ರೀಮತಿ ವಸುದಾ ಸಹಾಯಕ ಕಮಿಷನರ್ ಆಪ್ತ ಕಾರ್ಯದರ್ಶಿ ನಿತೀನ್,ಕಂದಾಯ ಅದಿಕಾರಿ ಅವಿನ್ ರಂಗತ್ಮಲೆ,ಗ್ರಾಮ ಆಡಳಿತ ಅದಿಕಾರಿ ಮಂಜುನಾಥ್.ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.