ಅಡ್ಕಾರು: ಅಂಜನಾದ್ರಿ ಕ್ಷೇತ್ರದಲ್ಲಿ ನಾಗರ ಪಂಚಮಿ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿಯ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ನಾಗರಪಂಚಮಿಯನ್ನು ಆ.9ರಂದು ಆಚರಿಸಲಾಯಿತು.

ದೇವಸ್ಥಾನದ ಅರ್ಚಕ ಬ್ರಹ್ಮಶ್ರೀ ವೇ. ಮೂ. ಪುರೋಹಿತ ನಾಗರಾಜ ಭಟ್ ಅವರ ನೇತೃತ್ವದಲ್ಲಿ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ನಾಗದೇವರಿಗೆ, ಹಾಲಭಿಷೇಕ, ಸೀಯಾಳಭಿಷೇಕ ಸೇರಿದಂತೆ ಮಹಾಪೂಜೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶ್ರೀಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಶಿವರಾಮ ರೈ ಕುರಿಯ ಸೇರಿದಂತೆ ಆಡಳಿತ ಸಮಿತಿ, ಸೇವಾ ಸಮಿತಿ, ಮಹಿಳಾ ಸಮಿತಿ, ಭಜನಾ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.