ಮೈಸೂರಿನಲ್ಲಿ ಕಾಂಗ್ರೆಸ್ ಜನಾಂದೋಲನ ಸಭೆ

0

ಸುದ್ದಿ ಜನಾಂದೋಲನದ ಫಲಕ ಸ್ವೀಕರಿಸಿ – ಬೆಂಬಲ ಸೂಚಿಸಿದ ರಾಜ್ಯಮಟ್ಟದ ನಾಯಕರುಗಳು

ಭ್ರಷ್ಟಾಚಾರ ಹಗರಣದ ವಿರುದ್ಧ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಇಂದು ಮೈಸೂರಿನಲ್ಲಿ ಆಯೋಜಿಸಿರುವ ಜನಾಂದೋಲನ ಸಭೆಯಲ್ಲಿ ಭಾಗವಹಿಸಿರುವ ರಾಜ್ಯಮಟ್ಟದ ನಾಯಕರು ಸುದ್ದಿ ಜನಾಂದೋಲನದ ಲಂಚ – ಭ್ರಷ್ಟಾಚಾರ ವಿರೋಧಿ ಫಲಕ ಸ್ವೀಕರಿಸಿ, ಬೆಂಬಲ ಸೂಚಿಸಿದರು.

ವಿಧಾನಸಭೆಯ ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಅರಕಲಗೂಡು ಶಾಸಕ ಶಿವಲಿಂಗೇಗೌಡ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಮಾಜಿ ಸಚಿವೆ ಮೋಟಮ್ಮ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ ಬಾವ, ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಯೋಗೇಂದ್ರ, ತುಮಕೂರು ಯುವ ಕಾಂಗ್ರೆಸ್ ಅಧ್ಯಕ್ಷ ಮನೋಹರ ಮೊದಲಾದವರು ಸುದ್ದಿ ಜನಾಂದೋಲನದ ಫಲಕ ಸ್ವೀಕರಿಸಿ ಬೆಂಬಲ ವ್ಯಕ್ತಪಡಿಸಿದರು.