ಐವರ್ನಾಡು : ಮುಚ್ಚಿನಡ್ಕ – ಬದಂತಡ್ಕ ರಸ್ತೆ ಕಾಂಕ್ರೀಟೀಕರಣಕ್ಕೆ ಅನುದಾನ ಮಂಜೂರು

0

ಐವರ್ನಾಡು ಗ್ರಾಮದ ಮುಚ್ಚಿನಡ್ಕ ಬದಂತ್ತಡ್ಕ ರಸ್ತೆಗೆ ಕರಾವಳಿ ಪ್ರಾಧಿಕಾರದಿಂದ ರೂ.5 ಲಕ್ಷ ಅನುದಾನ ಮಂಜೂರಾಗಿದೆ.
ಮಾಜಿ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ ಇವರು 2022-2023 ರಲ್ಲಿ ಅನುದಾನ ಬಿಡುಗಡೆ ಮಾಡಿಸಿದ್ದಾರೆ.
ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ನಡೆಯಲಿದ್ದು ಕರಾವಳಿ ಪ್ರಾಧಿಕಾರ ಇಂಜಿನೀಯರ್ ಪವನ್ ಕುಮಾರ್,ಹಾಗೂ ಇಂಜಿನಿಯರ್ ಮಣಿಕಂಠರವರು ರಸ್ತೆಯ ಎಸ್ಟಿಮೇಟ್ ಮಾಡಿದರು.
ಈ ಸಂದರ್ಭದಲ್ಲಿ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ,ಮಾಜಿ ಉಪಾಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ,ಮಹೇಶ್ ಜಬಳೆ ಉಪಸ್ಥಿತರಿದ್ದರು.