ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ ಬಾಳಿಲ ಒಕ್ಕೂಟದಿಂದ ಕಾಂಚೋಡು ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳಿಲ ಒಕ್ಕೂಟದ ಆಶ್ರಯದಲ್ಲಿ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಚತಾ ಕಾರ್ಯ ಆ. 11ರಂದು ನಡೆಯಿತು. ಈ ಸಂದರ್ಭದಲ್ಲಿ ನಿಂತಿಕಲ್ಲು ವಲಯ ಮೇಲ್ವಿಚಾರಕಿ ಶ್ರೀಮತಿ ಹೇಮಲತಾ, ಮುಪ್ಪೇರ್ಯ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರೇಮಲತಾ, ಬಾಳಿಲ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ತ್ರಿವೇಣಿ, ದೇವಸ್ಥಾನದ ಆಡಳಿತ ಧರ್ಮದರ್ಶಿ ಹಗ್ಡೆ ಪರಮೇಶ್ವರಯ್ಯ, ತಾ.ಪಂ.‌ಮಾಜಿ ಸದಸ್ಯೆ ಶ್ರೀಮತಿ ಜಾಹ್ನವಿ ಕಾಂಚೋಡು, ಸೇವಾ ಪ್ರತಿನಿಧಿ ಶ್ರೀಮತಿ ಬೇಬಿಶಾಲಿನಿ ಮತ್ತು ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.