ದೇವ ಸ.ಕಿ.ಪ್ರಾ.ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

0


ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವ ಒಕ್ಕೂಟ ಮತ್ತು ಗೆಳೆಯರ ಬಳಗ ದೇವ ಇವುಗಳ ಸಂಯುಕ್ತ ಆಶ್ರಯದಲ್ಲಿ ಆ. ೧೧ರಂದು ದೇವ ಸ.ಕಿ.ಪ್ರಾ.ಶಾಲೆಯಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.


ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಗೆಳೆಯರ ಬಳಗದ ಸದಸ್ಯರು ಕಳೆ ತೆಗೆಯಲು ಯಂತ್ರೋಪಕರಣಗಳನ್ನು ನಿಡಿ ಸಹಕರಿಸಿದ್ದರು. ಧ.ಗ್ರಾ.ಯೋಜನೆಯ ದೇವ ಒಕ್ಕೂಟದ ಅಧ್ಯಕ್ಷ ಯೋಗೀಶ್ ದೇ, ಗೆಳೆಯರ ಬಳಗದ ಅಧ್ಯಕ್ಷ ಮುಕುಂದ ಹಿರಿಯಡ್ಕ, ಸೇವಾ ಪ್ರತಿನಿಧಿ ತಿಮ್ಮಪ್ಪ ಕಡ್ಯ, ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಪದಾಧಿಕಾರಿಗಳು, ಗೆಳೆಯರ ಬಳಗದ ಸದಸ್ಯರು ಹಾಗೂ ಪದಾಧಿಕಾರಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.