ಜಾಲ್ಸೂರು : ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದಿಂದ ಸ್ವಚ್ಛತಾ ಕಾರ್ಯ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಜಾಲ್ಸೂರು ವಲಯದ ಜಾಲ್ಸುರು ಮತ್ತು ಅಂಜನಾದ್ರಿ ಒಕ್ಕೂಟದ ಪದಾಧಿಕಾರಿಗಳು ಸದಸ್ಯರುಗಳು ಸೇರಿ ಅಡ್ಕಾರು ಅಂಜನಾದ್ರಿಯ ಶ್ರೀ ಪ್ರಸನ್ನ ಆಂಜನೇಯ ದೇವಸ್ಥಾನ ವಠಾರದಲ್ಲಿ ಶ್ರದ್ದಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮವು ಆ.11ರಂದು ನಡೆಯಿತು.

ಈ ಸಂದರ್ಭದಲ್ಲಿ ಜಾಲ್ಸೂರು ಒಕ್ಕೂಟದ ಅಧ್ಯಕ್ಷ ಗಣೇಶ್ ಅಂಬಾಡಿಮೂಲೆ, ಅಂಜನಾದ್ರಿ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಜಾಲ್ಸೂರು, ಶ್ರೀ ಪ್ರಸನ್ನ ಆಂಜನೇಯ ದೇವಸ್ಥಾನ ಆಡಳಿತ ಮಂಡಳಿಯ ಜಯಂತ ಗೌಡ ಅಡ್ಕಾರು, ಶ್ರೀ ಕ್ಷೇತ್ರದ ಸೇವಾಸಮಿತಿ ಸದಸ್ಯ ಶಿವಪ್ರಸಾದ್ ಜಾಲ್ಸೂರು, ವಲಯ ಮೇಲ್ವಿಚಾರಕ ತೀರ್ಥರಾಮ, ಸೇವಾಪ್ರತಿನಿಧಿ ಚಂದ್ರಕಲಾ ಹಾಗೂ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.