ಜ್ಞಾನದೀಪ ವಿದ್ಯಾಸಂಸ್ಥೆಯ ಶ್ರೇಯಾ ಕೆ.ಪಿ. ಕರಾಟೆಯಲ್ಲಿ ರಾಷ್ಟ್ರಮಟ್ಟಕ್ಕೆ

0

ವಿದ್ಯಾ ಭಾರತಿ ಕರ್ನಾಟಕ ಇದರ ವತಿಯಿಂದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಶ್ರೇಯಾ.ಕೆ.ಪಿ. ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದು, ಸೆಪ್ಟೆಂಬರ್ ನಲ್ಲಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ಕರಾಟೆ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಹಾಗೂ ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಚೇತನ್ ಮುಂಡೋಡಿ ಹಾಗೂ ರಕ್ಷಿತಾ. ಟಿ. ದ್ವಿತೀಯ ಸ್ಥಾನ ಪಡೆದಿದ್ದರು.