ಸುಳ್ಯ ತಾಲೂಕು ಗುತ್ತಿಗೆದಾರರಸಂಘದ ಅಧ್ಯಕ್ಷರಾಗಿ ತೀರ್ಥಕುಮಾರ್ ಕುಂಚಡ್ಕ ಆಯ್ಕೆ

0

ಸುಳ್ಯ ತಾಲೂಕು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಇದರ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿತೀರ್ಥಕುಮಾರ್ ಕುಂಚಡ್ಕ ರವರು ಆಯ್ಕೆಯಾಗಿರುತ್ತಾರೆ.

ಸುಳ್ಯದ ಬೀರಮಂಗಲದ ಗೆಸ್ಟ್ ಹೌಸ್ ನಲ್ಲಿ ಸಂಘ ದ ಅಧ್ಯಕ್ಷ ಕೃಷ್ಣ ಕುಮಾರ್ ಬಾಳುಗೋಡುರವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಾರ್ಷಿಕ ಮಹಾ ಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇವರು ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.