ಕೊಡಗು ಸಂಪಾಜೆ: ಶಾಲಾ ವಿದ್ಯಾರ್ಥಿನಿಗೆ ಹಾವು ಕಡಿತ

0

ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲು

ಶಾಲಾ ವಿದ್ಯಾರ್ಥಿನಿಯೋರ್ವಳಿಗೆ ಹಾವು ಕಚ್ಚಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಕೊಡಗು ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ಆ.13ರಂದು ಸಂಜೆ ಸಂಭವಿಸಿದೆ.

ಕೊಡಗು ಸಂಪಾಜೆ ಗ್ರಾ.ಪಂ. ಮಾಜಿ ಸದಸ್ಯೆ ರಾಜೇಶ್ವರಿ ಅವರ ಪುತ್ರಿ ಚೈತನ್ಯ ಅವರು ಮನೆಯಲ್ಲಿ ಸೌದೆ ತೆಗೆಯುವ ವೇಳೆ ಕೈ ಬೆರಳಿಗೆ ಹಾವು ಕಚ್ಚಿದ್ದು, ಅವರನ್ನು ಅವರ ಸಹೋದರ ತಕ್ಷಣ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.