ಜಾಲ್ಸೂರು : ಕದಿಕಡ್ಕ ಶಾಲೆಗೆ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಸುಳ್ಯ ತಾಲೂಕು ಯೋಜನೆಯ ಜ್ಞಾನದೀಪ ಶಾಲಾ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಮಂಜೂರಾತಿ ಆದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರವನ್ನು ಜಾಲ್ಸೂರು ಗ್ರಾಮದ ಕದಿಕಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆ.13ರಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಜಾಲ್ಸೂರು ಒಕ್ಕೂಟದ ಅಧ್ಯಕ್ಷ ಗಣೇಶ್ ಅಂಬಾಡಿಮೂಲೆ, ಅಂಜನಾದ್ರಿ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಜಾಲ್ಸೂರು, ಒಕ್ಕೂಟದ ಉಪಾಧ್ಯಕ್ಷರುಗಳಾದ ದಯಾನಂದ ಮಹಾಬಲಡ್ಕ, ಶ್ರೀಮತಿ ಭಾಗೀರಥಿ ಕಲ್ಲಮುರ, ಜಾಲ್ಸೂರು ವಲಯದ ಮೇಲ್ವಿಚಾರಕ ತೀರ್ಥರಾಮ, ಸೇವಾಪ್ರತಿನಿಧಿಗಳಾದ ಚಂದ್ರಕಲಾ, ಬಾಲಕೃಷ್ಣ ಅಡ್ಕಾರು ಉಪಸ್ಥಿತರಿದ್ದರು.