ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

0

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಸಹಕಾರ ಕ್ಷೇತ್ರದಲ್ಲಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿಯನ್ನು ಸಹಕಾರ ರತ್ನ ಡಾ.ಎಂ ಎನ್ ರಾಜೇಂದ್ರ ಕುಮಾರ್ ಪ್ರಧಾನ ಮಾಡಿದರು.

ಸಂಘದ ಅಧ್ಯಕ್ಷ ಗಣೇಶ್ ಪೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ಪ್ರಶಸ್ತಿ ಸನ್ಮಾನ ಸ್ವೀಕರಿಸಿದರು. ಸಂಘದ ನಿರ್ದೇಶಕ, ನಿಕಟಪೂರ್ವಾಧ್ಯಕ್ಷ ಸುಬ್ರಹ್ಮಣ್ಯ ಕುಳ, ಪಂಜ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ನಾಯಕ್ ಬೇರ್ಯ ಉಪಸ್ಥಿತರಿದ್ದರು.