ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

0

ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2023-24ನೇ ಸಾಲಿನಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪ್ರಶಸ್ತಿ ಲಭಿಸಿದೆ.
ಸಂಘದ ಅಧ್ಯಕ್ಷರಾದ ಜಾಕೆ ಮಾಧವ ಗೌಡ, ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ ಇವರು ಮಂಗಳೂರಿನಲ್ಲಿ ಆ.14ರಂದು ನಡೆದ ದ.ಕ. ಜಿಲ್ಲಾ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಈ ಸಂಧರ್ಬದಲ್ಲಿ ಸಂಘದ
ಉಪಾಧ್ಯಕ್ಷರಾದ ಕುಲದೀಪ್ ಸುತ್ತುಕೋಟೆ,
ನಿರ್ದೇಶಕರುಗಳಾದ ಜಯರಾಮ ಬೆಳಗಜೆ, ರೋಹಿತ್ ಚಿಮುಳ್ಳು, ಶ್ರೀಮತಿ ಮುಕಾಂಬಿಕಾ, ಶ್ರೀಮತಿ ಭಾಗೀರಥಿ ಉಪಸ್ಥಿತರಿದ್ದರು