ಅರಂತೋಡು – ತೊಡಿಕಾನ ಸಹಕಾರಿ ಸಂಘಕ್ಕೆ ಸತತ 8ನೇ ಬಾರಿ ದ.ಕ. ಜಿಲ್ಲಾ ಬ್ಯಾಂಕ್ ಪ್ರಶಸ್ತಿ

0

ಎ ತರಗತಿ ಪಡೆದುಕೊಂಡ ಸಹಕಾರಿ ಸಂಘಗಳಲ್ಲಿ ತೃತೀಯ ಪ್ರಶಸ್ತಿಯ ಗರಿ

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2023 -24ನೇ ಸಾಲಿನಲ್ಲಿ ತನ್ನ ಅಪೂರ್ವ ಸೇವೆಗೆ ಲೆಕ್ಕ ಪರಿಶೋಧನೆಯಲ್ಲಿ ಎ ತರಗತಿ ಪಡೆದುಕೊಂಡ ಸಹಕಾರಿ ಸಂಘಗಳ ಪೈಕಿ ತೃತೀಯ ಸ್ಥಾನವನ್ನು ಪಡೆದು, ಸತತ 8ನೇ ಬಾರಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ಪಡೆದುಕೊಂಡಿದೆ.

ಮಂಗಳೂರಿನಲ್ಲಿ ಆ.14ರಂದು ಜರುಗಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್ ಅವರು ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ದಯಾನಂದ ಕುರುಂಜಿ , ನಿರ್ದೇಶಕರುಗಳಾದ ವಿನೋದ್ ಉಳುವಾರು, ಚಂದ್ರಶೇಖರ ಚೋಡಿಪಣೆ, ಕುಸುಮಾಧರ ಅಡ್ಕಬಳೆ, ಸಂತೋಷ್ ಚಿಟ್ಟನ್ನೂರು, ಶ್ರೀಮತಿ ಚಿತ್ರಾ ಶಶಿಧರ ದೇರಾಜೆ, ಗಣೇಶ್ ಕರಿಂಬಿ, ಸೋಮಯ್ಯ ಅಡ್ಯಡ್ಕ, ಸಂಘದ ಪರಿಣತ ನಿರ್ದೇಶಕರಾದ ಕೇಶವ ಅಡ್ತಲೆ, ಸಹ ಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.