ಮಡಪ್ಪಾಡಿ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ

0

ಮಂಗಳೂರಿನಲ್ಲಿ ನಡೆದ ದ ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ‌ ಗೌರವಿಸಲಾಗಿದೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಮಡಪ್ಪಾಡಿ ಮತ್ತು ಸಹಾಯಕ ಕಾರ್ಯನಿರ್ವಹಣಾಧಿಕಾರಿ ಸುನಿಲ್ ಮಡಪ್ಪಾಡಿ ಯವರನ್ನು ಶಾಲು ಹೊದಿಸಿ, ಪ್ರಶಸ್ತಿ ಪತ್ರ, ಸ್ಮರಣಿಕೆ ನೀಡಿ, ಶಾಲು ಹೊದಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ನಿರ್ದೇಶಕರಾದ ಸೋಮಶೇಖರ ಕೇವಳ, ಅಜಯ್ ವಾಲ್ತಾಜೆ, ಪ್ರವೀಣ ಯತೀಂದ್ರನಾಥ ಪಾಲ್ತಾಡು, ಕುಂಞಕ್ಕ ಹಾಗೂ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕರು ಉಪಸ್ಥಿತರಿದ್ದರು.