ನೆಲ್ಲೂರು ಕೆಮ್ರಾಜೆ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ

0

ಮಂಗಳೂರಿನಲ್ಲಿ ನಡೆದ ದ ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ‌ ಗೌರವಿಸಲಾಗಿದೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ನಾರ್ಣಕಜೆರವರನ್ನು ಶಾಲು ಹೊದಿಸಿ, ಪ್ರಶಸ್ತಿ ಪತ್ರ, ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಸಂಘದ ಉಪಾಧ್ಯಕ್ಷ ಜಯಪ್ರಸಾದ್ ಸುಳ್ಳಿ, ನಿರ್ದೇಶಕರಾದ ಶುಭಾಕರ ನಾಯಕ್ ಬೊಳ್ಳಾಜೆ, ಉಮೇಶ್ ಪ್ರಭು, ದೇವಿಪ್ರಸಾದ್ ಸುಳ್ಳಿ, ಚಂದ್ರ ದಾಸನಕಜೆ, ಇಂದಿರಾ ಎರ್ಮೆಟ್ಟಿ, ಸಂಧ್ಯಾ ಪುನುಕುಟ್ಟಿ, ನವೋದಯ ಪ್ರೇರಕಿ ಶ್ರೀಮತಿ ದೇವಕಿ, ಸೊಸೈಟಿ ಸಿಬ್ಬಂದಿ ಶುಭಾಶ್ಚಂದ್ರ ಕೆರೆಮೂಲೆ ಹಾಗೂ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕರು ಉಪಸ್ಥಿತರಿದ್ದರು.