ಪಂಜ ದೇಗುಲದಲ್ಲಿ ನಾಗತೀರ್ಥ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ

0

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಕೆ ನಾಗತೀರ್ಥ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಸ್ವಾತಂತ್ರೋತ್ಸವ ಮೆರವಣಿಗೆ ಮೂಲಕ ಭೇಟಿ ಕೊಟ್ಟರು ಹಾಗೂ ದೇಗುಲದಲ್ಲಿ ಭಜನೆ ಮಾಡಿ ತೀರ್ಥಪ್ರಸಾದ ಸ್ವೀಕರಿಸಿದರು.

ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾದ ಡಾ.ದೇವಿಪ್ರಸಾದ್ ಕಾನತ್ತೂರ್ ರವರು ಎಲ್ಲರನ್ನೂ ಸ್ವಾಗತಿಸಿ ದೇವಳದ ವತಿಯಿಂದ ಸಿಹಿತಿಂಡಿ ವಿತರಿಸಿದರು. ಮೆರವಣಿಗೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗಿರಿಜಾ ಜಳಕದಹೊಳೆ,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶ್ರೀಮತಿ ನಿರ್ಮಲಾ ಕುದ್ವ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನುರಾಜ ಕಕ್ಕ್ಯಾನ,ಶಾಲಾಭಿವೃದ್ಧಿ ಸಮಿತಿ ಸದಸ್ಯರು,ಪೋಷಕರು ಹಾಗೂ ಶಾಲಾ ಶಿಕ್ಷಕಿಯರು ಇದ್ದರು.