ದುಗ್ಗಲಡ್ಕ ಮಿತ್ರ ಯುವಕ ಮಂಡಲ ಮತ್ತು ಕುರಲ್ ತುಳುಕೂಟದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

0


ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಮತ್ತು ಕುರಲ್ ತುಳುಕೂಟದ ವತಿಯಿಂದ 78 ಸ್ವಾತಂತ್ರ್ಯೊತ್ಸವವನ್ನು ಆಚರಿಸಲಾಯಿತು.
ಮಾಜಿ ನ.ಪಂ.ಸದಸ್ಯ ಇಬ್ರಾಹಿಂ ನೀರಬಿದಿರೆ ಧ್ವಜಾರೋಹಣ ನೆರವೇರಿಸಿದರು.ಮಾಜಿ ನ.ಪಂ.ಸದಸ್ಯೆ ಶ್ರೀಮತಿ ಜಯಶೀಲ ಮುಖ್ಯ ಅತಿಥಿಯಾಗಿದ್ದರು. ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ ಶುಭ ಹಾರೈಸಿದರು.


ಯುವಕ ಮಂಡಲದ ಗೌರವಾಧ್ಯಕ್ಷ ಚೇತನ್ ಕಲ್ಮಡ್ಕ,ಅಧ್ಯಕ್ಷ ತೀರ್ಥರಾಮ ಕೊಯಿಕುಳಿ, ಮಾಜಿ ಅಧ್ಯಕ್ಷರುಗಳಾದ ಧನಂಜಯ ಕಲ್ಮಡ್ಕ, ಭವಾನಿಶಂಕರ ಕಲ್ಮಡ್ಕ, ದಿನೇಶ್ ಕೊಯಿಕುಳಿ, ಕಾರ್ಯದರ್ಶಿ ಜಯಂತ ಕೊಯಿಕುಳಿ, ಕೋಶಾಧಿಕಾರಿ ಚಂದ್ರನ್ ಕೂಟೇಲು,ತುಳುಕೂಟದ ಗೌರವಾಧ್ಯಕ್ಷೆ ನವ್ಯ ದಿನೇಶ್ ಕೊಯಿಕುಳಿ, ಅಧ್ಯಕ್ಷ ರಮೇಶ್ ನೀರಬಿದಿರೆ, ಕೋಶಾಧಿಕಾರಿ ಪ್ರಿಯಾಸದಾನಂದ ಮೊದಲಾದವರು ಉಪಸ್ಥಿತರಿದ್ದರು.


ಕುರಲ್ ತುಳುಕೂಟದ ಕಾರ್ಯದರ್ಶಿ ಕೆ.ಟಿ.ಭಾಗೀಶ್ ಸ್ವಾಗತಿಸಿ, ಯು.ಮಂಡಲದ ಮಾಜಿ ಅಧ್ಯಕ್ಷ ಮನೋಜ್ ಪಾನತ್ತಿಲ ಕಾರ್ಯಕ್ರಮ ನಿರೂಪಿಸಿದರು.