ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಥಮಿಕ ವಿಭಾಗದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

0

ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆ ಇದರ ಪ್ರಾಥಮಿಕ ವಿಭಾಗದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಶಾಲಾ ಎಸ್ಡಿಎಂಸಿಯ ಕಾರ್ಯಧ್ಯಕ್ಷರಾದ ಶ್ರೀನಾಥ್ ರೈ ಅವರು ಧ್ವಜಾರೋಹಣ ಮಾಡುವುದರ ಮೂಲಕ ಆಚರಿಸಲಾಯಿತು.

ಅವರು ಈ ಸಂದರ್ಭದಲ್ಲಿ ಮಾತನಾಡುತ್ತಾ, ಇಂದು ದೇಶದಾದ್ಯಂತ ಜಾತಿ ಧರ್ಮ ಮತಗಳ ಭೇದ ಭೇದಗಳನ್ನು ಮರೆತು ಆಚರಿಸುವಂತಹ ಹಬ್ಬ ಈ ಸ್ವಾತಂತ್ರ್ಯ ದಿನವಾಗಿದೆ. ಪ್ರತಿ ಮನೆ ಮನೆಗಳಲ್ಲಿ ರಾಷ್ಟ್ರಧ್ವಜವನ್ನ ಹಾರಿಸಿ, ನಮ್ಮ ದೇಶಕ್ಕಾಗಿ ನಮ್ಮ ನಿಷ್ಠೆಯನ್ನು ಪ್ರದರ್ಶಿಸುತ್ತಿದ್ದೇವೆ.

ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತ ಮಹಾನ್ ನಾಯಕರ ಬಲಿದಾನವನ್ನು ನಾವು ಗೌರವ ಪೂರಕವಾಗಿ ನೆನಪಿಸಿಕೊಳ್ಳಲೇ ಬೇಕಾಗಿದೆ ಎಮದರು. ಶಾಲಾ ಎಸ್ಡಿಎಂಸಿಯ ಸದಸ್ಯರುಗಳಾದ ಹರ್ಷ ಜೋಗಿಬೆಟ್ಟು, ಮುರಳಿಕೃಷ್ಣ, ಶಿವಾಜಿ, ಶ್ರೀಮತಿ ಪಾರ್ವತಿ, ಶ್ರೀಮತಿ ಸುನಿತಾ, ಎಂ ಎನ್ ಭಟ್, ಪ್ರಾಂಶುಪಾಲರಾದ ಜನಾರ್ಧನ ಇವರುಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಮಾಯಿಲಪ್ಪ ಜಿ ಸ್ವಾಗತಿಸಿ ವಂದಿಸಿದರು. ಶಾಲಾ ಶಿಕ್ಷಕವೃಂದ, ಪೋಷಕರು, ವಿದ್ಯಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.