ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ನ ವಾರ್ಷಿಕ ಸಭೆ

0

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ ಮತ್ತು ಉಡುಪಿ ಜಿಲ್ಲೆ ಸುಳ್ಯ ವಲಯ ಇದರ ವಾರ್ಷಿಕ ಸಭೆಯು ಸುಳ್ಯದ ಅಂಬಟೆಡ್ಕದ ಕನ್ನಡ ಭವನದಲ್ಲಿ ಆ.13 ರಂದು ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ವಲಯದ ಅಧ್ಯಕ್ಷ ದಿವಾಕರ ಮುಂಡಾಜೆ ವಹಿಸಿದ್ದರು. ಸಭಾ ಕಾರ್ಯಕ್ರಮವನ್ನು ಜಿಲ್ಲಾ ಅಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ಜಿಲ್ಲಾ ಉಪಾಧ್ಯಕ್ಷರಾದ ರಮೇಶ್ ಕಲಾಶ್ರೀ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ್, ಕೋಶಾಧಿಕಾರಿ ನವೀನ್ ರೈ ಪಂಜಳ, ವಲಯ ಸ್ಥಾಪಕಾಧ್ಯಕ್ಷರಾದ ಗೋಪಾಲ್ ಸುಳ್ಯ, ಎಸ್.ಕೆ.ಪಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಕರುಣಾಕರ ಎಣ್ಣೆಮಜಲು, ಜಿಲ್ಲಾ ಮಾಧ್ಯಮ ಪ್ರತಿನಿಧಿ ಹರೀಶ್ ಪಿ.ರಾವ್, ಜಿಲ್ಲಾ ಕಟ್ಟಡ ಸಮಿತಿ ಪ್ರತಿನಿಧಿ ಅವಿನ್ ಬೆಟ್ಟಂಪಾಡಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಲಯ ಪ್ರಧಾನ ಕಾರ್ಯದರ್ಶಿ ದಿನೇಶ್ ಏನೆಕಲ್ಲು ವಾರ್ಷಿಕ ವರದಿ ಮಂಡಿಸಿದರು. ವಲಯ ಕೋಶಾಧಿಕಾರಿ ವೆಂಕಟೇಶ್ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು.
ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಶೇ.85 ಕ್ಕಿಂತ ಅಧಿಕ ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ವಿದ್ಯಾನಿಧಿ ನೀಡಿ ಗೌರವಿಸಲಾಯಿತು.
ಜಿಲ್ಲಾ ಕಟ್ಟಡ ಸಮಿತಿಗೆ ಹೊಸದಾಗಿ ಲೋಕೇಶ್ ಬಿ.ಎನ್ ರವರನ್ನು ಪ್ರತಿನಿಧಿಯಾಗಿ ಆಯ್ಕೆ ಮಾಡಲಾಯಿತು.
ಸುಧಾಕರ ರೈ ಬೆಳ್ಳಾರೆ ಪ್ರಾರ್ಥನೆ ನೆರವೇರಿಸಿದರು. ದಿವಾಕರ ಮುಂಡಾಜೆ ಸ್ವಾಗತಿಸಿ, ದಿನೇಶ್ ಏನೆಕಲ್ಲು ವಂದಿಸಿದರು. ಸುದರ್ಶನ್ ಪಾತಿಕಲ್ಲು ಕಾರ್ಯಕ್ರಮ ನಿರೂಪಿಸಿದರು.