ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಕಬ್ಸ್ , ಬುಲ್ ಬುಲ್ ವಿಭಾಗಗಳ ಉದ್ಘಾಟನೆ ಆ.15ರಂದು ನಡೆಯಿತು.ವಿದ್ಯಾ ಸಂಸ್ಥೆಯ ಅಧ್ಯಕ್ಷ ನ. ಸೀತಾರಾಮ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಗೈಡ್ಸ್ ಸುಳ್ಯ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರೇಮಲತಾ ಅವರು ಸ್ಕೌಟ್ ಮತ್ತು ಬುಲ್ ಬುಲ್ ನ ಮಕ್ಕಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಶುಭ ಹಾರೈಸಿದರು. ಕೆನರ ಬ್ಯಾಂಕ್ ಸುಳ್ಯ ಶಾಖೆಯ ಪ್ರಬಂಧಕ ರಣವೀರ್ ಕುಮಾರ್ ಅವರು ಕೆನರಾ ಬ್ಯಾಂಕ್ ನ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಶುಭ ಹಾರೈಸಿದರು.ವೇದಿಕೆಯಲ್ಲಿ ಸಂಸ್ಥೆಯ ಸಂಚಾಲಕ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಸಂಸ್ಥೆಯ ಕೋಶಾಧಿಕಾರಿ ಸುಧಾಕರ ಕಾಮತ್ ವಿನೋಬನಗರ , ಸಂಸ್ಥೆಯ ಆಡಳಿತಾಧಿಕಾರಿ ಗೋಪಾಲ ರಾವ್, ಎಸ್. ಡಿ.ಎಂ. ಸಿ. ಅಧ್ಯಕ್ಷೆ ಶ್ರೀಮತಿ ಸೌಮ್ಯ ಕದಿಕಡ್ಕ, ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ಅಶೋಕ ಅಡ್ಕಾರು ಉಪಸ್ಥಿತರಿದ್ದರು. ನಂತರ ರಾಷ್ಟ್ರೋತ್ಥಾನ ಶಿಶು ಮಂದಿರದ ಪುಟಾಣಿಗಳಿಂದ ದೇಶ ಭಕ್ತರ ಛಧ್ಮವೇಷ ಸ್ಪರ್ಧೆ ಮತ್ತು ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗೀತೆ ಸ್ಪರ್ಧೆ ನಡೆಯಿತು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್ ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ಅರ್ಚನ ಕಾರ್ಯಕ್ರಮ ನಿರೂಪಿಸಿದರು.