ಪೆರಾಜೆ: ಯುವ ಮೋರ್ಚಾ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೈಕ್ ಜಾಥ

0

78ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಬೈಕ್ ಜಾಥಾ ಕಾರ್ಯಕ್ರಮವು ಪೆರಾಜೆ ಕೃಷಿ ಪತ್ತಿನ ಸಹಕಾರಿ ಸಂಘ ಕುಂಬಳಚೇರಿ ಇದರ ಮುಂಭಾಗದಿಂದ ಆರಂಭ ಗೊಂಡು ಪೆರಾಜೆಯ ಮುಖ್ಯರಸ್ತೆಯ ವರೆಗೆ ಯಶಸ್ವಿ ಆಗಿ ನಡೆಯಿತು.ಈ ಸಂದರ್ಭದಲ್ಲಿ ಮಡಿಕೇರಿ ಭಾ. ಜ. ಪ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಾಗೂ ಈ ಕಾರ್ಯಕ್ರಮದಲ್ಲಿ ಭಾ. ಜ. ಪ ಶಕ್ತಿ ಕೇಂದ್ರ ಪ್ರಮುಖ್ ಸುಭಾಶ್ಚಂದ್ರ ಬಂಗಾರಕೋಡಿ, ಸಹಪ್ರಮುಕ್ ಉದಯಚಂದ್ರ ಕುಂಬಳಚೆರಿ,ಪಂಚಾಯತ್ ಉಪಾಧ್ಯಕ್ಷರಾದ ನಂಜಪ್ಪ ನಿಡ್ಯಮಲೆ, ಪೆರಾಜೆ ಕೃಷಿ ಪತ್ತಿನ ಸಹಕಾರಿ ಸಂಘ ಉಪಾಧ್ಯಕ್ಷರಾದ ಅಶೋಕ ಪೆರುಮುಂಡ, ಸಹಕಾರಿ ಸಂಘದ ನಿರ್ದೇಶಕರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಬೂತ್ ಮಟ್ಟದ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. ಪೆರಾಜೆ ಯುವ ಮೋರ್ಚಾ ಅಧ್ಯಕ್ಷರಾದ ಪ್ರದೀಪ್ ಕುಂಬಳಚೇರಿ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ವಹಿಸಿದ್ದರು. ಮಡಿಕೇರಿ ಯುವ ಮೋರ್ಚ ಪ್ರದಾನ ಕಾರ್ಯದರ್ಶಿ ಪ್ರವೀಣ ಮಜಿಕೋಡಿ ಉಪಸ್ಥಿತರಿದರು.