ದ. ಕ. ಜಿ. ಪಂ. ಕಿ. ಪ್ರಾ ಶಾಲೆ ಮೆಟ್ಟಿನಡ್ಕ ದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ದ. ಕ. ಜಿ. ಪಂ. ಕಿ. ಪ್ರಾ ಶಾಲೆ ಮೆಟ್ಟಿನಡ್ಕ ದಲ್ಲಿ ಸಂಭ್ರಮ ದ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು.


ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷರಾದ ರವಿ ಗುಂಡಡ್ಕ ರವರು ಧ್ವಜಾರೋಹಣ ನೆರವೇರಿಸಿದರು.

ಈ ಸಂಧರ್ಭ ದಲ್ಲಿ ಎಸ್. ಡಿ.ಎಂ.ಸಿ ಯ ಪದಾಧಿಕಾರಿಗಳು, ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಸೇವಾಪ್ರತಿನಿಧಿ ರಮೇಶ್ ಮೆಟ್ಟಿನಡ್ಕ, ಅಂಗನವಾಡಿ ಕಾರ್ಯಕರ್ತೆಯರು,ಪೋಷಕರು ಹಳೇವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆ ಯರು, ಉಪಸ್ಥಿತರಿದ್ದರು.


ಧ್ವಜಾರೋಹಣ ದ ಬಳಿಕ, ವಿದ್ಯಾರ್ಥಿಗಳು, ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಿಡಿದು, ಭಾರತ್ ಮಾತಾಕಿ ಜೈ ಎನ್ನುವ ಘೋಷಣೆಯೊಂದಿಗೆ ಮೆರವಣಿಗೆ ಯಲ್ಲಿ ಸಾಗಿ, ಮತ್ತೆ ಶಾಲೆಗೆ ತೆರಳಿ ಸಭಾಕಾರ್ಯಕ್ರಮ ನಡೆಯಿತು.

ಮಕ್ಕಳಿಂದ, ವಿವಿಧ ದೇಶಭಕ್ತಿಗೀತೆ, ಭಾಷಣ ನಡೆಯಿತು. ವೇದಿಕೆಯಲ್ಲಿ ಸಭಾಧ್ಯಕ್ಷತೆಯನ್ನು SDMC ಅಧ್ಯಕ್ಷರು ರವಿ ಗುಂಡಡ್ಕ ವಹಿಸಿದ್ದರು.

ಮುಖ್ಯ ಅಥಿತಿಗಳಾಗಿ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯ ಮೇಲ್ವಿಚಾರಕ ಬಾಲಕೃಷ್ಣ ಗೌಡ, ಉಪಸ್ಥಿತರಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಅನಿತಾ, ಪೋಷಕ ಪ್ರತಿನಿಧಿ ರಮೇಶ್ ಮೆಟ್ಟಿನಡ್ಕ ಅಂಗನವಾಡಿ ಕಾರ್ಯಕರ್ತೆ, ಕಮಲ, ಎಸ್. ಡಿ.ಎಂ.ಸಿ ಉಪಾಧ್ಯಕ್ಷೆ, ಶ್ರೀಮತಿ ಹರೀಣಾಕ್ಷಿ, ಆಶಾಕಾರ್ಯಕರ್ತೆ ಶ್ರೀಮತಿ ಭಾಗೀರಥಿ, ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಅಪೂರ್ವ, ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿ ಶ್ರೀಮತಿ ರೇವತಿ ಯವರು, ಎಲ್ಲರಿಗೂ ವಂದಿಸಿದರು.